ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | AYANUR NEWS | 7 ಸೆಪ್ಟೆಂಬರ್ 2021
ಅಂಗಡಿಯೊಂದರ ಬಾಗಿಲು ಮುರಿದು ಒಳ ನಗ್ಗಿದ ಕಳ್ಳರು ಹಣಕ್ಕಿಂತಲೂ ಹೆಚ್ಚಿನ ಮೊತ್ತದ ಗುಟ್ಕಾ, ಸಿಗರೇಟು ಕದ್ದು ಪರಾರಿಯಾಗಿದ್ದಾರೆ. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಯನೂರಿನ ಬಿ.ಹೆಚ್.ರಸ್ತೆಯಲ್ಲಿರುವ ಭರತ್ ರಾಜ್ ಅವರಿಗೆ ಸೇರಿದ ಸಿದ್ಧೇಶ್ವರ ಪ್ರಾವಿಜನ್ ಸ್ಟೋರ್’ನಲ್ಲಿ ಕಳ್ಳತನವಾಗಿದೆ. ಅಂಗಡಿಯ ರೋಲಿಂಗ್ ಶೆಟರ್ ಮುರಿದು ಖದೀಮರು ಕೈಚಳಕ ತೋರಿಸಿದ್ದಾರೆ.
ಗುಟ್ಕಾ, ಸಿಗರೇಟ್ ಕಳವು
ಖದೀಮರು ಅಂಗಡಿಯಲ್ಲಿ ಸುಮಾರು 5 ಸಾವಿರ ರೂ. ನಗದು ಕದ್ದಿದಾರೆ. ಆದರೆ ಇದಕ್ಕಿಂತಲೂ ಹೆಚ್ಚಿನ ಮೊತ್ತದ ಗುಟ್ಕಾ, ಸಿಗರೇಟು ಕಳವು ಮಾಡಿದ್ದಾರೆ. ಹತ್ತು ಬಾಕ್ಸ್ RMD, ಎರಡು ಬ್ಯಾಗ್ ವಿಮಲ್, ಎರಡು ಬ್ಯಾಗ್ ಮಧು, ಎರಡು ಬ್ಯಾಗ್ ಸ್ಟಾರ್ ಗುಟ್ಕಾ, ನಾಲ್ಕು ಬಂಡಲ್ ಸಿಗರೇಟ್ ಕದ್ದೊಯ್ದಿದ್ದಾರೆ.
ಒಟ್ಟು ಸಮಾರು 75 ಮೌಲ್ಯದ ವಸ್ತುಗಳು ಮತ್ತು ನಗದು ಕಳ್ಳತನವಾಗಿದೆ ಎಂದು ಭರತ್ ರಾಜ್ ಅವರು ದೂರಿನಲ್ಲಿ ತಿಳಿಸಿದ್ದಾರೆ. ಕುಂಸಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






