ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಸೆಪ್ಟೆಂಬರ್ 2021
ಶಿವಮೊಗ್ಗದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆತನ ಎದೆ, ಹೊಟ್ಟೆ ಭಾಗಕ್ಕೆ ತಿವಿದು ಕೊಲೆ ಮಾಡಲಾಗಿದೆ.
ಟಿಪ್ಪುನಗರದ ಕೆ.ಕೆ.ಶೆಡ್ ಬಳಿಕ ಘಟನೆ ಸಂಭವಿಸಿದೆ. ಇರ್ಫಾನ್ ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಯುವಕರ ಗುಂಪೊಂದು ಇರ್ಫಾನ್ ಮೇಲೆ ದಾಳಿ ಮಾಡಿ, ಮಾರಕಾಸ್ತ್ರಗಳಿಂದ ತಿವಿದು ಕೊಲೆ ಮಾಡಿದೆ. ಚರಂಡಿಯಲ್ಲಿ ಇರ್ಫಾನ್ ಮೃತದೇಹ ಪತ್ತೆಯಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬರಬೇಕಿದೆ.
ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200