ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021
ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹರ್ಷ (22) ನೇಣಿಗೆ ಶರಣಾದ ವಿದ್ಯಾರ್ಥಿ. ಕಾಶಿಪುರದ ಮನೆಯಲ್ಲಿ ಹರ್ಷ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ಸಂಭವಿಸಿದೆ.
ಹರ್ಷ ತನ್ನ ತಾಯಿಯೊಂದಿಗೆ ಕಾಶಿಪುರದ ಮನೆಯಲ್ಲಿದ್ದ. ಆತನ ಸಹೋದರ ಬೆಂಗಳೂರಿನಲ್ಲಿದ್ದಾರೆ. ಶಿವಮೊಗ್ಗದ ಎಟಿಎನ್’ಸಿ ಕಾಲೇಜಿನಲ್ಲಿ ಹರ್ಷ ಬಿ.ಕಾಂ ಓದುತ್ತಿದ್ದ. ಆತ್ಮಹತ್ಯೆಗ ನಿಖರ ಕಾರಣ ತಿಳಿದು ಬಂದಿಲ್ಲ.
ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200