ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021
ರವೀಂದ್ರನಗರ ಪ್ರಸನ್ನಗಣತಿ (ಬಲಮುರಿ) ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಶರನ್ನವರಾತ್ರೋತ್ಸವದ ಅಂಗವಾಗಿ ಪ್ರತಿದಿನ ಶ್ರೀ ಚಂಡಿಕಾಯಾಗ, ಶ್ರೀಲಲಿತಾ ಸಹಸ್ರನಾಮ ಸ್ತೋತ್ರ ಪಠಣ, ಭಜನಾ – ಭಜನೋತ್ಸವ ಹಾಗೂ 15 ದಿನ ನಿರಂತರ ‘ಶ್ರೀದೇವಿ ಭಾಗವತ ಪುರಾಣ ಪ್ರವಚನ’ ನಂತರ ನಿತ್ಯ ಸ್ಥಳೀಯ ಕಲಾವಿದರಿಂದ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ.
ನವಾರಾತ್ರಿ ಅಂಗವಾಗಿ ಅ.7 ರಿಂದ 20 ರವರೆಗೆ ವೈಭವದ ದಸರಾ ಶರನ್ನವರಾತ್ರೋತ್ಸವ ಆಚರಣೆ ನಡೆಯಲಿದೆ. ಅ.20 ರಂದು ಲೋಕ ಕಲ್ಯಾಣಾರ್ಥವಾಗಿ ಪ್ರತಿವರ್ಷದಂತೆ ‘ಶತಚಂಡಿಕಾಯಾಗ’ ನಡೆಯಲಿದೆ.
ಜ್ಯೋತಿಷ್ಯ ಶಾಸ್ತ್ರ ಚತುರ್ಶಾಸ್ತ್ರ ಪಂಡಿತರಾದ ವಿದ್ವಾನ್ ಪಂಜಾ ಭಾಸ್ಕರ ಭಟ್ಟ ಉಡುಪಿ ಇವರಿಂದ 15 ದಿನಗಳ ನಿರಂತನ ‘ಶ್ರೀದೇವಿ ಭಾಗವತ ಪುರಾಣ ಪ್ರವಚನ’ ಕಾರ್ಯಕ್ರಮ ನಡೆಯಲಿದೆ. ಸಂಜೆ 7.30ರಿಂದ ಪ್ರತಿದಿನ ನಗರದ ಪ್ರಸಿದ್ಧ ಯಕ್ಷಗಾನ ಭಾಗವತರು, ವಿದ್ವಾನ್ ಶ್ರೀ ಐನಬೈಲು ಪರಮೇಶ್ವರ ಹೆಗಡೆಯವರ ಮಾರ್ಗದರ್ಶನದಲ್ಲಿ ಸ್ಥಳೀಯ ಪ್ರಸಿದ್ಧ ಕಲಾವಿದರ ಸಹಕಾರದೊಂದಿಗೆ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





