ಭದ್ರಾವತಿಯಲ್ಲಿ ಕಡಜದ ಹುಳುಗಳ ದಾಳಿಗೆ ಮತ್ತೊಬ್ಬ ಬಲಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 12 ಅಕ್ಟೋಬರ್ 2021

ಕಡಜದ ಹುಳುಗಳ ದಾಳಿಯಿಂದ ಕೆಲವು ದಿನದ ಹಿಂದೆ ಇಬ್ಬರು ಮೃತಪಟ್ಟಿದ್ದರು. ಈಗ ಮತ್ತೊಬ್ಬ ವ್ಯಕ್ತಿ ಕಡಜದ ಹುಳುಗಳ ದಾಳಿಯಿಂದ ಕೊನೆಯುಸಿರೆಳೆದಿದ್ದಾರೆ.

ಭದ್ರಾವತಿ ತಾಲೂಕು ಉಕ್ಕುಂದ ಗ್ರಾಮದ ಕೃಷಿ ಕೂಲಿ ಕಾರ್ಮಿಕ ಕುಮಾರ್ (38) ಮೃತ ದುರ್ದೈವಿ.

ಕೆಂಚಮ್ಮನಹಳ್ಳಿಯ ರಂಗಪ್ಪ ಎಂಬುವವರ ತೆಂಗಿನ ತೋಟದಲ್ಲಿ ಕಾಯಿ ಕೀಳುವ ಕೆಲಸ ಮಾಡುತ್ತಿದ್ದರು. ಈ ವೇಳೆ ಕಡಜದ ಹುಳುಗಳು ದಾಳಿ ನಡೆಸಿವೆ. ತೀವ್ರ ಅಸ್ವಸ್ಥರಾಗಿದ್ದ ಕುಮಾರ್ ಅವರನ್ನು ಭದ್ರಾವತಿಯ ನರ್ಸಿಂಗ್ ಹೋಂಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ADVT JULY NANJAPPA HOSPITAL HOME LAB TESTING

ಚಿಕಿತ್ಸೆಗೆ ಸ್ಪಂದಿಸದೆ ಕುಮಾರ್ ಮೃತಪಟ್ಟಿದ್ದಾರೆ. ಪತ್ನಿ, ಒಬ್ಬ ಗಂಡು ಮತ್ತು ಒಬ್ಬ ಹೆಣ್ಣು ಮಕ್ಕಳನ್ನು ಇದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ಇಬ್ಬರು ಸಾವು

ಈ ತಿಂಗಳ ಆರಂಭದಲ್ಲಿ ಕಡಜದ ಹುಳುಗಳ ದಾಳಿಗೆ ಭದ್ರಾವತಿ ತಾಲೂಕು ಇಬ್ಬರು ಮೃತಪಟ್ಟಿದ್ದಾರೆ. ಆನೆಕೊಪ್ಪದ ಎಂಪಿಎಂ ಬಡಾವಣೆ ಬಳಿ ಕಡಜದ ಹುಳುಗಳ ದಾಳಿಗೆ ಸಿ.ಎನ್.ನಂಜಪ್ಪ (50) ಮತ್ತು ಮಲ್ಲಿಕಾರ್ಜುನ್ (55) ಎಂಬುವವರು ಮೃತರಾಗಿದ್ದರು. ಟ್ರಾಕ್ಟರ್’ಗೆ ಕಟ್ಟಿದ್ದ ಕೋಲು ಕಡಜದ ಗೂಡಿಗೆ ತಾಗಿತ್ತು. ಇದರಿಂದ ಸಿಟ್ಟಿಗೆದ್ದ ಹುಳುಗಳು ದಾಳಿ ಮಾಡಿದ್ದವು.

1632381453891714 0

AVvXsEi8Ac5ZsMIgS4Jz30esQXnANsyqm9IIwg nufI lektr jUlKUuz2As55HIMKzaVCSA mvi3ziJYrT6bh95Gghl41xeUHT4DKu4p30aRUJoWqJ283zKAkt4M4 uZKs5Mhybj YH8TOh0wmuu1WMMkIOKf4JU7gM IC2 ZFBa4 KlGL6c0GU9JI9z46Bw=s1466

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment