ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2021
ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವತಿಯಿಂದ ಇವತ್ತು ಶಿವಮೊಗ್ಗ ನಗರದಲ್ಲಿ ವಿಜಯದಶಮಿ ಪಥಸಂಚಲನ ಆಯೋಜಿಸಲಾಗಿತ್ತು. ನಗರದ ವಿವಿಧೆಡೆ RSS ಕಾರ್ಯಕರ್ತರು ಪಥಸಂಚಲನ ನಡೆಸಿದರು.
ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಬಿಜೆಪಿ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಗಣವೇಷ ತೊಟ್ಟು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗದ ಸೈನ್ಸ್ ಮೈದಾನದಿಂದ ಹೊರಟ ಮೆರವಣಿಗೆ ಬಿ.ಹೆಚ್.ರಸ್ತೆ, ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಸಾಗಿತು. RSS ಬ್ಯಾಂಡ್, ಗಣವೇಷ, ದಂಡ ಹಿಡಿದು ಕಾರ್ಯಕರ್ತರು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.
ಹಿರಿಯ ಸ್ವಯಂ ಸೇವಕರಾದ ಭಾಮಾ ಶ್ರೀಕಂಠ, ಗಿರೀಶ್ ಕಾರಂತ್, ಮುಖ್ಯ ಶಿಕ್ಷಕ್ ಪಣೀಶ್, ನಗರ ಕಾರ್ಯವಾಹ ಚೇತನ್ ಮತ್ತು ಸ್ವಯಂ ಸೇವಕರು ಉಪಸ್ಥಿತರಿದ್ದರು.
ಪಥಸಂಚಲನ ಸಾಗುವ ಮಾರ್ಗದುದ್ದಕ್ಕೂ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.



LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






