BREAKING NEWS | ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷರ ಪದಚ್ಯುತಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ |SHIMOGA NEWS | 22 ಅಕ್ಟೋಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಅವಿಶ್ವಾಸ ಗೊತ್ತುವಳಿಯಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಡಿ.ಆನಂದ್’ಗೆ ಸೋಲಾಗಿದೆ. ಎಲ್ಲಾ ನಿರ್ದೇಶಕರು ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿದ್ದಾರೆ. ಈ ಮಧ್ಯೆ ಡಿ.ಆನಂದ್ ಅವರು ಅವಿಶ್ವಾಸ ಗೊತ್ತುವಳಿ ಸಭೆಗೆ ಗೈರಾಗಿದ್ದರು.

ಶಿವಮೊಗ್ಗ ಹಾಲು ಒಕ್ಕೂಟದ ಆಡಳಿತ ಸಭಾಂಗಣದಲ್ಲಿ ಅವಿಶ್ವಾಸ ಸಭೆ ನಡೆಯಿತು. 14 ನಿರ್ದೇಶಕರ ಪೈಕಿ 13 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು. ಎಲ್ಲಾ ನಿರ್ದೇಶಕರು ಶಿಮುಲ್ ಅಧ್ಯಕ್ಷ ಡಿ.ಆನಂದ್ ಅವರ ವಿರುದ್ಧ ಮತ ಚಲಾಯಿಸಿದ್ದಾರೆ. ಇದರಿಂದಾಗಿ ಡಿ.ಆನಂದ್ ಅವರು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವಂತಾಗಿದೆ. ಈ ಮಧ್ಯೆ ಡಿ.ಆನಂದ್ ಅವರು ಸಭೆಗೆ ಗೈರಾಗಿದ್ದರು.

ಸಹಕಾರ ಸಂಘಗಳ ಉಪನಿಬಂಧಕ ನಾಗೇಶ್ ಎಸ್.ಡೋಂಗ್ರೆ ಅವರು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಬಸವರಾಜು ಅವರು ಸಭೆಯಲ್ಲಿದ್ದರು.

NH nephrolody%2Bad %2Bkannada 10

ಶಿಮುಲ್’ನಲ್ಲಿ ಮುಂದೇನು?

ಅಧ್ಯಕ್ಷರ ಪದಚ್ಯುತಿಯ ಹಿನ್ನೆಲೆ ಆಡಳಿತಾತ್ಮಕ ದೃಷ್ಟಿಯಿಂದ ಶಿಮುಲ್ ಉಪಾಧ್ಯಕ್ಷರೇ ಅಧ್ಯಕ್ಷರ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಶಿಮುಲ್ ಉಪಾಧ್ಯಕ್ಷ ಹೆಚ್.ಕೆ.ಬಸಪ್ಪ ಅವರು ಪ್ರಭಾರ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. ನೂತನ ಅಧ್ಯಕ್ಷರಿಗಾಗಿ ಚುನಾವಣೆ ನಡೆಯಲಿದೆ. ಇದಕ್ಕಾಗಿ ಸಹಕಾರ ಇಲಾಖೆ ಚುನಾವಣಾ ದಿನಂಕ ಪ್ರಕಟಿಸಲಿದೆ.

SHIVAMOGGA LIVE CONTATCT

ಯಾಕಾಗಿ ಪದಚ್ಯುತಿ ಮಾಡಿದ್ದು?

ಅಧ್ಯಕ್ಷರ ಅವಧಿ ಮುಗಿದ ಹಿನ್ನೆಲೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ ಸ್ಥಾನ ಬಿಟ್ಟುಕೊಡಲು ಡಿ.ಆನಂದ್ ಅವರು ನಿರಾಕರಿಸಿದ್ದರು. ಹಾಗಾಗಿ 14 ನಿರ್ದೇಶಕರ ಪೈಕಿ 10 ನಿರ್ದೇಶಕರು ಡಿ.ಆನಂದ್ ಅವರ ವಿರುದ್ಧ ಅವಿಶ್ವಾಸ ಮಂಡನೆಗೆ ಸಭೆ ಕರೆಯಬೇಕು ಎಂದು ಜೂನ್ ತಿಂಗಳಲ್ಲಿ ನೊಟೀಸ್ ನೀಡಿದ್ದರು. ಈ ಹಿನ್ನೆಲೆ ಜೂನ್ 15ರಂದು ಸಭೆ ನಿಗದಿಪಡಿಸಲಾಗಿತ್ತು. ಆದರೆ ತಡೆಯಾಜ್ಞೆ ಕೋರಿ ಡಿ.ಆನಂದ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

1632381444428179 2

ಆನಂದ್ ಅವರು ಕೋರ್ಟಿಗೆ ಹೋಗಿದ್ದೇಕೆ?

ಕರೋನ ಸಂದರ್ಭದಲ್ಲಿ ಯಾವುದೆ ಸ್ಥಳೀಯ ಸಂಸ್ಥೆ, ಸಹಕಾರಿ ಸಂಸ್ಥೆಗಳ ಚುನಾವಣೆ ನಡೆಸಬಾರದು ಎಂದು ಸರ್ಕಾರ ಆದೇಶಿಸಿದೆ. ಇಂತಹ ಸಂದರ್ಭ ಅವಿಶ್ವಾಸ ಮಂಡನೆಗೆ ಅವಕಾಶ ನೀಡುವುದು ಸರಿಯಲ್ಲ. ಒಂದು ವೇಳೆ ಅಧ್ಯಕ್ಷರ ಪದಚ್ಯುತಿಯಾದರೆ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲು ಸಾಧ್ಯವಿಲ್ಲ. ಅಧ್ಯಕ್ಷರಿಲ್ಲದೆ ಇದ್ದರೆ ಆಡಳಿತಾತ್ಮಕ ಸಮಸ್ಯೆ ಉಂಟಾಗಲಿದೆ. ಆದ್ದರಿಂದ ಅವಿಶ್ವಾಸ ಮಂಡನೆಗೆ ಅವಕಾಶ ನೀಡಬಾರದು ಎಂದು ಡಿ.ಆನಂದ್ ಅವರು ಕೋರ್ಟ್ ಮೊರೆ ಹೋಗಿದ್ದರು.

AVvXsEiHtbdlILzWKDbs eokLcsQS4zJTdywVwVUjBmK3odi7t2 FqcMHTVqWfNZ 3vAV0hMkdbzQF YYikPUe2WJI1yvZyjZ5moXTVZLPuwx1Cgrc pvdY1d8ZUs64zwM8kkiZVrvkGPdeuu1uw5yv2coqShgtg5DXSRTOj4Zwi4x0Xgcjzs3gYiJCB zIhFA=s926

ಆನಂದ್ ಅರ್ಜಿ ವಜಾಗೊಂಡಿತ್ತು

ಶಿಮುಲ್ ಅಧ್ಯಕ್ಷ ಡಿ.ಆನಂದ್ ಅವರು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್’ನಲ್ಲಿ ವಜಾಗೊಂಡಿತ್ತು. ಹಾಗಾಗಿ ಹೈಕೋರ್ಟ್’ನ ಮತ್ತೊಂದು ಪೀಠದಲ್ಲಿ ಡಿ.ಆನಂದ್ ಅವರು ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯೂ ವಜಾಗೊಂಡಿದ್ದರಿಂದ ಇವತ್ತು ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ನಿಗದಿಯಾಗಿತ್ತು.

AVvXsEj79jYIA W2rzsH axmmdYzAXYUEuM7 ywPmRIRwQXU0t6xdcnyghRfyyw6OcvqzT HF6szhzb4uFK7I M GlAxjv1UDY4EVN7 Yu9msH8siZM5i3w qnzwlcOVIWatYLLniSzz07WydcH2AhRN9iKrPWF v0C7tf8R9Qm2YKvOGd 8aRjRejH LJDpOA=s926

AVvXsEizgemSCs0oCLuCYkTIazzq1prN4DeH0ehUqv q8j2BjoD3JcQFpkdsSMyNdu6JnFvToVC8kkI9R9AG5FX8iYSFAVy1YSwByIJdsPxSSUekBCmsQFtx8bdm7VZ6ajeBNcob0Vvn4l6mKHxSFf3VWLeSfQ7FRBwtco96HvUCdRVJ8YuFlR

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment