ಶಿವಮೊಗ್ಗ ಲೈವ್.ಕಾಂ | 1 ಮಾರ್ಚ್ 2019
ಕಾರಿನಲ್ಲಿ ಶ್ರೀಗಂಧದ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿಯ ಕಮ್ಮರಡಿ ಬಳಿ ಘಟನೆ ನಡೆದಿದೆ.
ಓಮ್ನಿ ಕಾರಿನಲ್ಲಿ ಶ್ರೀಗಂಧ ಕಳ್ಳಸಾಗಣೆ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ತಪಾಸಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ನಾಗೇಂದ್ರ ಮತ್ತು ನವೀನ್ ಎಂಬುವವರನ್ನು ಬಂಧಿಸಲಾಗಿದೆ. ಆದರ್ಶ, ಪ್ರವೀಣ್, ರಮೇಶ್, ಪುಟ್ಟ ಎಂಬುವವರು ಪರಾರಿಯಾಗಿದ್ದಾರೆ. ಇವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕಾರಿನಲ್ಲಿ ಮೂರು ಗಂಧದ ತುಂಡು, ಮಚ್ಚು ಇತ್ತು ಎಂದು ತಿಳಿದು ಬಂದಿದೆ. ಈ ಸಂಬಂಧ ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]