ಶಿವಮೊಗ್ಗ ಲೈವ್.ಕಾಂ |SHIMOGA NEWS | 24 ಅಕ್ಟೋಬರ್ 2021
ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ಖಂಡಿಸಿ ಶಿವಮೊಗ್ಗದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು. ಯುವ ಬ್ರಿಗೇಡ್ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು.
ಸೈನ್ಸ್ ಮೈದಾನದಿಂದ ಗೋಪಿ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದ ಯುವ ಬ್ರಿಗೇಡ್ ಕಾರ್ಯಕರ್ತರು, ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ದಸರಾ ಹಬ್ಬದ ಸಂದರ್ಭ ದುರ್ಗಾ ಮಾತೆಯ ಮೂರ್ತಿಯನ್ನು ಹಾನಿ ಮಾಡಲಾಗಿದೆ. ಹಿಂದೂಗಳ ಹತ್ಯೆ ಮಾಡಲಾಗಿದೆ. ಮಕ್ಕಳನ್ನು ಹೊತ್ತೊಯ್ದು ಅತ್ಯಾಚಾರ ಎಸಗಲಾಗಿದೆ. ಬಾಂಗ್ಲಾದೇಶದ ಪೀರಗಂಜ್, ರಂಗ್ ಪುರ್ ಪ್ರದೇಶಗಳಲ್ಲಿ ಹಿಂದೂಗಳ ಮನೆಗಳನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು.
ಯುವ ಬ್ರಿಗೇಡ್’ನ ವಿನಯ್, ಕಿರಣ್ ಹೆಗ್ಗದ್ದೆ, ಪ್ರವೀಣ್ ಕುಮಾರ್, ಸಹೋದರಿ ನಿವೇದಿತಾ ಪ್ರತಿಷ್ಠಾನದ ಪ್ರಮುಖರು ಪಂಜಿನ ಮೆರವಣಿಗೆಯಲ್ಲಿದ್ದರು.