ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2021
ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಈಗ ರೆಕಾರ್ಡ್ ರೂಂನಲ್ಲಿ ತಪಾಸಣೆ ಮಾಡಿದ್ದಾರೆ.
ಮಂಗಳವಾರ ಶಿವಮೊಗ್ಗ ಮಹಾನಗರ ಪಾಲಿಕೆ ರೆಕಾರ್ಡ್ ರೂಂಗೆ ಭೇಟಿ ನೀಡಿದ ಎಸಿಬಿ ಅಧಿಕಾರಿಗಳು ತಪಾಸಣೆ ನಡೆಸಿದರು.
ಇದನ್ನೂ ಓದಿ | ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಎಸಿಬಿ ದಾಳಿ
ಕಂದಾಯ ವಿಭಾಗದ ಮೇಲಿನ ದಾಳಿಗೆ ಪೂರಕವಾಗಿ ರೆಕಾರ್ಡ್ ರೂಂನಲ್ಲಿ ತಪಾಸಣೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಕಂದಾಯ ವಿಭಾಗದಲ್ಲಿ ಭ್ರಷ್ಟಾಚಾರ ಮತ್ತು ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂಬ ಆರೋಪಗಳಿದ್ದವು. ಈ ಹಿನ್ನಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ಮಾಡಿದ್ದರು. ಈಗ ರೆಕಾರ್ಡ್ ರೂಂನಲ್ಲಿ ಕಡತಗಳಿಗೆ ಪರಿಶೀಲನೆ ನಡೆಸಿದ್ದಾರೆ.