ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಅಕ್ಟೋಬರ್ 2021
ಬೈಕಿನ ಫುಟ್ ರೆಸ್ಟ್ ಮೇಲೆ ಕಾಲಿಟ್ಟ ವಿಚಾರಕ್ಕೆ ಯುವಕರ ಮಧ್ಯೆ ಗಲಾಟೆಯಾಗಿದೆ. ಘಟನೆಯಲ್ಲಿ ಇಬ್ಬರು ಯುವಕರ ಮೇಲೆ ಹಲ್ಲೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯ ಹರಕೆರೆಯಲ್ಲಿ ಘಟನೆ ಸಂಭವಿಸಿದೆ. ಶಿವಾಲಯ ಸಮೀಪ ಟೀ ಅಂಗಡಿಯೊಂದರ ಬಳಿ ಗಲಾಟೆಯಾಗಿದೆ.
ಕಾಲಿಟ್ಟಿದ್ದಕ್ಕೆ ಶುರುವಯ್ತು ಜಗಳ
ಇತ್ತೀಚೆಗೆ ಸುನಿಲ್ ಎಂಬುವವರು ಸ್ನೇಹಿತನೊಂದಿಗೆ ವಾಕಿಂಗ್’ಗೆ ತೆರಳಿದ್ದರು. ಮಳೆ ಬಂದಿದ್ದರಿಂದ ಟೀ ಅಂಗಡಿಯೊಂದರ ಮುಂದೆ ನಿಂತಿದ್ದರು. ಆ ಹೊತ್ತಿಗೆ ಸುನಿಲ್’ನ ಸಹೋದರ ಪ್ರಕಾಶ್ ಬೈಕಿನಲ್ಲಿ ಅಲ್ಲಿಗೆ ಬಂದಿದ್ದಾರೆ.

ಅಲ್ಲಿಯೇ ಇದ್ದ ಆದರ್ಶ್ ಮತ್ತು ಆಕಾಶ್ ಎಂಬುವವರು ಪ್ರಕಾಶ್ ಅವರ ಬೈಕಿನ ಫುಟ್ ರೆಸ್ಟ್ ಮೇಲೆ ಕಾಲಿಟ್ಟಿದ್ದಾರೆ. ಕಾಲು ತೆಗೆಯುವಂತೆ ಪ್ರಕಾಶ್ ಹೇಳಿದ್ದಾರೆ. ಈ ವಿಚಾರಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆಯಾಗಿದೆ. ಆದರ್ಶ ಮತ್ತು ಆಕಾಶ್ ಅವರು ತಮ್ಮ ಸ್ನೇಹಿತರನ್ನು ಕರೆಯಿಸಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಗಾಯಗೊಂಡಿದ್ದ ಸುನಿಲ್ ಮತ್ತು ಪ್ರಕಾಶ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















