ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ನವೆಂಬರ್ 2021
ಶಿವಮೊಗ್ಗ ಕೇಂದ್ರ ಕಾರಾಗೃಹದ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೈಲು ಆವರಣದಲ್ಲಿರುವ ಕ್ವಾರ್ಟರ್ಸ್’ನಲ್ಲಿ ಘಟನೆ ಸಂಭವಿಸಿದೆ.
ಅಸ್ಪಾಕ್ ಅಲಿ ತೊಗರಿ (25) ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ. ಜೈಲಿನಲ್ಲಿ ಡಿ ದರ್ಜೆ ನೌಕರನಾಗಿರುವ ಅಸ್ಪಾಕ್ ಅಲಿ ತೊಗರಿ ನಿನ್ನೆ ಬುಧವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೆ ಕಾರಣವೇನು?
ಅಸ್ಪಾಕ್ ಅಲಿ ತೊಗರಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಾರ್ಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಸ್ಪಾಕ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ಅದರಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಮಾಧ್ಯಮಗಳಗೆ ತಿಳಿಸಿದ್ದಾರೆ.
ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.