ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ನವೆಂಬರ್ 2021
ದೀಪಾವಳಿ ಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ತಾಂಡಾಗಳಲ್ಲಿ ಮೇರಾ ಹಬ್ಬವನ್ನು ವೈಭವದಿಂದ ಆಚರಿಸಲಾಯಿತು. ಕರೋನ ಹಿನ್ನೆಲೆ ಕಳೆದ ವರ್ಷ ಆಚರಣೆಗೆ ಅಡ್ಡಿಯುಂಟಾಗಿತ್ತು. ಈ ಭಾರಿ ಸಾಂಪ್ರದಾಯಿಕವಾಗಿ ಮೇರಾ ಆಚರಿಣೆ ಮಾಡಲಾಯಿತು.
ಆಯನೂರಿನಲ್ಲಿ ಲಂಬಾಣಿ ಸಮುದಾಯದವರ ಮೇರಾ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಸಂಪ್ರದಾಯ, ಆಚರಣೆಗಳೆಂದರೆ ಮೂಗು ಮುರಿಯುವವರ ಮಧ್ಯೆ, ಲಂಬಾಣಿ ಸಮುದಾಯದವರು ಮೇರಾ ಅಚರಣೆಯನ್ನು ಮುಂದುವರೆಸುತ್ತಿದ್ದಾರೆ. ಇದು ಸಮುದಾಯವನ್ನು ಸಾಂಪ್ರದಾಯಿಕವಾಗಿ ಗಟ್ಟಿಗೊಳಿಸುತ್ತಿದೆ.
ಮೇರಾ ಹಬ್ಬ ಅಂದರೇನು? ಹೇಗಿರುತ್ತೆ?
ದೀಪಾವಳಿ ಸಂದರ್ಭ ಮೇರಾ ಹಬ್ಬವನ್ನು ಆಚರಿಸಲಾಗುತ್ತದೆ. ಮೇರಾ ಅಂದರೆ ಕತ್ತೆಲಯಿಂದ ಬೆಳಕಿನೆಡೆಗೆ ಸಾಗುವ ಪ್ರಕ್ರಿಯ. ಮೊದಲ ದಿನ ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ. ಎರಡನೇ ದಿನ ಹೂವು ಕೀಳುವ ಸಂಪ್ರದಾಯ ನಡೆಯಲಿದೆ. ಬಂಜಾರ ಸಮುದಾಯದ ಯುವತಿಯರು ಕಾಡಿಗೆ ಹೋಗಿ ಹೂವು ಕೀಳಬೇಕು. ಬುಟ್ಟಿಯಲ್ಲಿ ಹೂವು ತುಂಬಿಕೊಂಡು ಜಾನಪದ ಗೀತೆಗಳನ್ನು ಹೇಳುತ್ತ, ಸಾಂಪ್ರದಾಯಿಕ ನೃತ್ಯ ಮಾಡುತ್ತ ತಾಂಡಾಗೆ ಮರಳುತ್ತಾರೆ.
ಹಬ್ಬದ ದಿನ ಮೇರಾ ಅಚರಣೆ ನಡೆಸಲಾಗುತ್ತದೆ. ಅವಿವಾಹಿತೆಯರು ದೀಪಾಗಳನ್ನು ಹಿಡಿದು ತಾಂಡಾದ ಪ್ರತಿ ಮನೆಗೂ ಹೋಗಿ ದೀಪ ಬೆಳಗುತ್ತಾರೆ. ತಾಂಡಾದ ಪ್ರತಿ ಮನೆಯಲ್ಲೂ ಕತ್ತಲು ದೂರಾಗಿ ಬೆಳಕು ಹರಿಯಲಿ ಎಂದು ಹಾಡಿ, ದೀಪ ಬೆಳಗಿ ಬರುತ್ತಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ ತಾಂಡಾಗಳಲ್ಲೂ ಈ ಭಾರಿ ಮೇರಾ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಹಬ್ಬ ಅಂದ್ಮೇಲೆ ಸಿಹಿ ಇರಲೇಬೇಕು. ಶಿವಮೊಗ್ಗ ನಗರದಲ್ಲಿ ಕೇವಲ ಏಳು ನಿಮಿಷದಲ್ಲಿ ರೆಡಿಯಾಗುತ್ತೆ ನೀವು ಕೇಳಿದ ಕೇಕ್. ಮೊದಲ ಮೂರು ದಿನ ಭರ್ಜರಿ ಆಫರ್. ಕರೆ ಮಾಡಿ.. ಆರ್ಡರ್ ಮಾಡಿ..

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















