ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021
ನಟ ರಮೇಶ್ ಅರವಿಂದ್ ಅವರು ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ವಿಚಾರ ತಿಳಿದು ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.
ಶೋ ರೂಂ ಒಂದರ ಉದ್ಘಾಟನೆಗಾಗಿ ನಟ ರಮೇಶ್ ಅರವಿಂದ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ರಮೇಶ್ ಅರವಿಂದ್, ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಅತಿದೊಡ್ಡ ನಷ್ಟ ಅನುಭವಿಸುತ್ತಿದ್ದೇವೆ. ಎಲ್ಲರಿಗೂ ಅವರೊಂದಿಗೆ ನನೆಪುಗಳಿವೆ. ಅಪ್ಪುಗೆ ನಮನ ಸಲ್ಲಿಸುವ ಉದ್ದೇಶದಿಂದ ನವೆಂಬರ್ 16ರಂದು ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಹೊಸ ಚಿತ್ರ ನ.19ಕ್ಕೆ ರಿಲೀಸ್
ಇನ್ನು, ತಮ್ಮ ನೂತನ ಚಿತ್ರ ಹಂಡ್ರೆಡ್ (100) ಟ್ರೇಲರ್ ಬಿಡುಗಡೆಯಾಗಿದೆ. ನ.19ರಂದು ಸಿನಿಮಾ ತೆರೆ ಕಾಣಲಿದೆ. ಸಾಮಾಜಿಕ ಜಾಲತಾಣ ಮತ್ತು ಮೊಬೈಲ್ ಬಳಕೆ ಕುರಿತ ಕೌಟುಂಬಿಕ ಥ್ರಿಲ್ಲರ್ ಸಿನಿಮಾ ಇದು. ನಟಿ ರಚಿತಾ ರಾಮ್, ಪೂರ್ಣಾ ಸೇರಿದಂತೆ ತಂತ್ರಜ್ಞರ ದೊಡ್ಡ ತಂಡವೇ ನಮ್ಮೊಂದಿಗಿದೆ ಎಂದು ನಟ ರಮೇಶ್ ಅರವಿಂದ್ ತಿಳಿಸಿದರು.
(ಶಿವಮೊಗ್ಗದಲ್ಲಿ ಇದೇ ಮೊದಲು – ಲೈವ್ ಕಿಚಿನ್, ಏಳು ನಿಮಿಷದಲ್ಲಿ ರೆಡಿಯಾಗುತೆ ಕೇಕ್ – ಈಗಲೆ ಫೋನ್ ಮಾಡಿ, ನಿಮ್ಮ ಆರ್ಡರ್ ಬುಕ್ ಮಾಡಿ)