ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಹುಟ್ಟುಹಬ್ಬ, ಗೋಶಾಲೆಗೆ ಮೇವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಹುಟ್ಟಹಬ್ಬದ ಅಂಗವಾಗಿ ಗೋ ಶಾಲೆಯಲ್ಲಿ ಗೋವುಗಳಿಗೆ ಮೇವು ವಿತರಿಸಲಾಯಿತು. ಶಿವಮೊಗ್ಗದ ಅಬ್ಬಲಗೆರೆಯಲ್ಲಿರುವ ಶ್ರೀ ಜ್ಞಾನೇಶ್ವರಿ ಗೋಶಾಲೆಯಲ್ಲಿ ಮೇವು ನೀಡಲಾಯಿತು. ಯುವ ಕಾಂಗ್ರೆಸ್, ಸ್ನೇಹ ಕೂಟದ ಸಹಯೋಗದಲ್ಲಿ ಮೇವು ವಿತರಣೆ ಮಾಡಲಾಯಿತು.

ಇದೆ ವೇಳೆ ಮಾತನಾಡಿದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಸೇವಾ ಮನೋಭಾವನೆಯಿಂದ ನಿಸ್ವಾರ್ಥ ಸೇವೆ ಮಾಡಿದರೆ ಮನುಷ್ಯ ಎಂತಹ ಎತ್ತರಕ್ಕೂ ಏರಬಹುದು ಎನ್ನುವುದನ್ನು ಬಿ.ವಿ. ಶ್ರೀನಿವಾಸ್ ತೋರಿಸಿಕೊಟ್ಟಿದ್ದಾರೆ ಎಂದರು.

ಇನ್ನು, ಭದ್ರಾವತಿ ಕಾಂಗ್ರೆಸ್ ಯುವ ಮುಖಂಡ ಗಣೇಶ್ ಮಾತನಾಡಿ, ಬಿ.ವಿ. ಶ್ರೀನಿವಾಸ್ ಅವರು ರಾಜಕೀಯವಾಗಿ ಹೆಸರಾಗುವುದಕ್ಕಿಂತ ತಮ್ಮ ಸೇವೆಯ ಮೂಲಕವೇ ದೇಶಾದ್ಯಂತ ಖ್ಯಾತಿ ಪಡೆದಿದ್ದಾರೆ. ದೇಶಾದ್ಯಂತ ಸಂಚರಿಸಿ ಜನರ ಸಂಕಷ್ಟ ಆಲಿಸುತ್ತಿದ್ದಾರೆ. ಇಂತಹವರು ನಮ್ಮ ಊರಿನವರು ಎನ್ನುವುದೇ ನಮ್ಮ ಹೆಮ್ಮೆ ಎಂದರು.

ಪ್ರಮುಖರಾದ ವಿಜಯಕುಮಾರ್, ಎನ್.ರಮೇಶ್, ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ, ದರ್ಶನ್ ಬಳ್ಳೇಶ್ವರ, ಚೇತನ್, ಮಧುಸೂದನ್, ಚಿರಂಜೀವಿ ಬಾಬು, ಬಿ.ವಿ.ಶ್ರೀನಿವಾಸ್ ಅವರ ಕುಟುಂಬದವರು ಈ ವೇಳೆ ಉಪಸ್ಥಿತರಿದ್ದರು.

(ಆಗಿಂದಾಗ್ಗೆ ಆರೋಗ್ಯ ತಪಾಸಣೆಯಿಂದ ಸಂಭವಿಸಬಹುದಾದ ಅಪಾಯ ತಪ್ಪಲಿದೆ. ಇಲ್ಲಿದೆ ತಜ್ಞ ವೈದ್ಯರಿಂದ ಸೂಕ್ತ ತಪಾಸಣೆ, ಸೂಕ್ತ ಸಲಹೆ)

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 7, 2021

Leave a Comment