‘ಬಿಟ್ ಕಾಯಿನ್ ಹಗರಣದಲ್ಲಿ ಶಿವಮೊಗ್ಗದ ಬಿಜೆಪಿ ನಾಯಕರು, ಅವರ ಮಕ್ಕಳು’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021

ಬಿಟ್ ಕಾಯಿನ್ ಹಗರಣದಲ್ಲಿ ಜಿಲ್ಲೆಯ ಬಿಜೆಪಿಯ ಪ್ರಭಾವಿ ನಾಯಕರು ಮತ್ತು ಅವರ ಮಕ್ಕಳು ಇರುವ ಸಂಶಯವಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ಮುಖಂಡರು, ಅವರ ಮಕ್ಕಳಿರುವ ಶಂಕೆ ಇದೆ. ಈ ಬಗ್ಗೆ ತನಿಖೆ ಮಾಡಬೇಕು. ಭ್ರಷ್ಟಾಚಾರ ಮತ್ತು ಲೂಟಿಯ ಹಿಂದೆ ಬಿಜೆಪಿ ನಾಯಕರು ಇದ್ದಾರೆಂಬುದು ಬಹಿರಂಗವಾಗಿದೆ. ಈಗಾಗಲೇ ಬಿಜೆಪಿಯಲ್ಲಿ ತಲ್ಲಣ ಉಂಟು ಮಾಡಿರುವ ಈ ಪ್ರಕರಣ ರಾಜ್ಯ ಸರ್ಕಾರವನ್ನು ಉರುಳಿಸುತ್ತದೆ ಎಂಬುದರಲ್ಲಿ ಅನುಮಾನವಿಲ್ಲ ಎಂದು ಭವಿಷ್ಯ ನುಡಿದರು.

AVvXsEg7D64eppM2Y2YXBDC80Q2TdBmP2uvjR kzBF IPI

ದೊಡ್ಡ ನಾಯಕನಾಗುವ ಭ್ರಮೆ

ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರನ್ನು ಟೀಕೆ ಮಾಡುವುದರಿಂದ ದೊಡ್ಡ ನಾಯಕರಾಗುತ್ತೇವೆಂಬ ಭ್ರಮೆಯಲ್ಲಿದ್ದಾರೆ. ಶಿವಮೊಗ್ಗ ನಗರದ ಸಮಸ್ಯೆಗಳು ಅವರಿಗೆ ಗೊತ್ತಿಲ್ಲ. ಪೂಜೆ, ಓಡಾಟ ಮತ್ತು ಧಾರ್ಮಿಕ ಭಾವನೆಗಳ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ತಾವೊಬ್ಬ ಜವಾಬ್ದಾರಿಯುತ ಸಚಿವ ಎಂಬುದನ್ನು ಮರೆತು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟ ಮತ್ತಷ್ಟು ತೀವ್ರ

ಮಹಾನಗರ ಪಾಲಿಕೆ ಸಮಸ್ಯೆ ಮತ್ತು ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಹೋರಾಟ ಮತ್ತಷ್ಟು ತೀವ್ರಗೊಳಿಸಲಾಗುವುದು. ಮೆಗ್ಗಾನ್ ಆಸ್ಪತ್ರೆ ಸಮಸ್ಯೆಗಳ ಆಗರವಾಗಿದೆ. ಸಿಮ್ಸ್ ನಿರ್ದೇಶಕರನ್ನು ಬದಲಿಸಿ ಅರ್ಹರಿಗೆ ಅವಕಾಶ ನೀಡಬೇಕು. ಜತೆಗೆ ಮಹಾನಗರ ಪಾಲಿಕೆ ಆಯುಕ್ತರನ್ನೂ ಬದಲಿಸಿ ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಸುಂದರೇಶ್ ಒತ್ತಾಯಿಸಿದರು.

ಆಶ್ರಯ ಸಮಿತಿ ಅವ್ಯವಹಾರಗಳನ್ನು ಬಯಲಿಗೆಳೆಯಬೇಕಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿನ ಸಮಸ್ಯೆ ಬಗೆಹರಿಯಬೇಕಾಗಿದೆ. ಕಾಂಗ್ರೆಸ್ ಪಕ್ಷ ಈ ಎಲ್ಲದರ ವಿರುದ್ಧ ಮಹಾನಗರ ಪಾಲಿಕೆ ಸಭೆಗಳಲ್ಲಿ ಮತ್ತು ಸಾರ್ವಜನಿಕವಾಗಿ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 12, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment