‘ವಿಐಎಸ್ಎಲ್’ಗೆ ಗಣಿ ಮಂಜೂರು ಮಾಡಿಸಿದ್ದಾಯ್ತು, ಎಂಪಿಎಂ ಆರಂಭಿಸುವ ಪ್ರಯತ್ನವೂ ಶುರುವಾಗಿದೆ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗಣಿ ಮಂಜೂರು ಮಾಡಿಸಿದರೆ ವಿಎಐಎಸ್ಎಲ್’ಗೆ ಬಂಡಾವಳ ಹಾಕುತ್ತೇವೆ, ಕಾರ್ಖಾನೆಯನ್ನು ಪುನಾರಂಭ ಮಾಡಿಸುತ್ತೇವೆ ಎಂದು ಭಾಷಣ ಮಾಡಿದ ಬಿಜೆಪಿ ಮಂತ್ರಿಗಳು ಮತ್ತು ಸಂಸದರು, ಈವರೆಗೂ ಕಾರ್ಖಾನೆಗಾಗಿ ಏನನ್ನೂ ಮಾಡಿಲ್ಲ ಎಂದು ಭದ್ರಾವತಿ ಶಾಸಕ ಸಂಗಮೇಶ್ವರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಐಎಸ್ಎಲ್ ಕಾರ್ಖಾನೆಗೆ ಗಣಿ ಮಂಜೂರಾಗಿದೆ. ಕೇಂದ್ರದ ಒಪ್ಪಿಗೆ ಸಿಕ್ಕಿದೆ. ಈಗ ಕಾರ್ಖಾನೆಯನ್ನು ಆರಂಭಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಗುತ್ತಿಗೆ ಕಾರ್ಮಿಕರಿಗೆ 26 ದಿನ ಕೆಲಸ ನೀಡಬೇಕು ಎಂಬ ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದರು.

ಎಂಪಿಎಂ ಆರಂಭಕ್ಕೆ ನಡೆಯುತ್ತಿದೆ ಪ್ರಯತ್ನ

BK Sangameshwara Bhadravathi BDVT 1 1

ಎಂಪಿಎಂ ಕಾರ್ಖಾನೆಯ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕೊಡಿಸುವಲ್ಲಿ ಸಫಲರಾಗಿರುವುದಾಗಿ ತಿಳಿಸಿದ ಸಂಗಮೇಶ್ವರ್, ಕಾರ್ಖಾನೆ ಆರಂಭಕ್ಕೆ ಪ್ರಯತ್ನಿಸುತ್ತಿರುವುದಾಗಿ ಸ್ಪಷ್ಟಪಡಿಸಿದರು. ಲೀಸ್ ಆಧಾರದ ಮೇಲೆ ಕಾರ್ಖಾನೆ ಶುರು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಮುಖಂಡ ಚಂದ್ರೆಗೌಡ, ಹೆಚ್.ಎಲ್.ಷಡಾಕ್ಷರಿ, ರಾಮೇಗೌಡ, ಶ್ರೀನಿವಾಸ್, ಬಿ.ಟಿ.ನಾಗರಾಜ್, ಖಲೀಲ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment