ಬಿ-ಫಾರಂ ಇಲ್ಲದೆ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ, ಪಾದಯಾತ್ರೆಯಲ್ಲಿ ಬಂದು ಉಮೇದುವಾರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ನವೆಂಬರ್ 2021

ವಿಧಾನ ಪರಿಷತ್ ಚುನಾವಣೆಗೆ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. ಬಿ-ಫಾರಂ ಇಲ್ಲದೆಯೇ ಆರ್.ಪ್ರಸನ್ನಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಇವರು ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಕೆ.ಬಿ.ಶಿವಕಮಾರ್ ಅವರಿಗೆ ಆರ್.ಪ್ರಸನ್ನಕುಮಾರ್ ಅವರು ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಸೂಚಕರಾಗಿ ಹಾಜರಾಗಿದ್ದರು.

ನಾಮಪತ್ರಕ್ಕೆ ಪೂಜೆ, ಪಾದಯಾತ್ರೆ

ಇದಕ್ಕೂ ಮುನ್ನ ಆರ್.ಪ್ರಸನ್ನಕುಮಾರ್ ಅವರು ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ದೇವರ ಮುಂದೆ ನಾಮಪತ್ರವನ್ನು ಇರಿಸಿ ಪೂಜೆ ಸಲ್ಲಿಸಲಾಯಿತು. ಪತ್ನಿ ಪ್ರಭಾವತಿ ಪ್ರಸನ್ನಕುಮಾರ್, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್, ಎನ್.ರಮೇಶ್, ವಿಜಯಕುಮಾರ್ ಸೇರಿದಂತೆ ಹಲವು ಈ ವೇಳೆ ಉಪಸ್ಥಿತರಿದ್ದರು.

ಬಳಿಕ ಪಕ್ಷದ ಕಚೇರಿಗೆ ಆಗಮಿಸಿದ ಆರ್.ಪ್ರಸನ್ನ ಕುಮಾರ್ ಅವರು ಮುಖಂಡರೊಂದಿಗೆ ಚರ್ಚೆ ನಡೆಸಿದರು. ಕಾಂಗ್ರೆಸ್ ಜಿಲ್ಲಾ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ಸೂಚಕರಾಗಿ ತೆರಳಿ ನಾಮಪತ್ರ ಸಲ್ಲಿಸಿದರು.

AVvXsEg7D64eppM2Y2YXBDC80Q2TdBmP2uvjR kzBF IPI

ಬಿ-ಫಾರಂ ಇಲ್ಲದೆಯೇ ನಾಮಪತ್ರ

ವಿಧಾನ ಪರಿಷತ್’ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿಲ್ಲ. ಹಾಗಾಗಿ ಬಿ-ಫಾರಂ ಇಲ್ಲದೆಯೇ ಪ್ರಸನ್ನ ಕುಮಾರ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ವಿಧಾನ ಪರಿಷತ್’ನ ಹಾಲಿ ಸದಸ್ಯರಾಗಿರುವ ಆರ್.ಪ್ರಸನ್ನ ಕುಮಾರ್ ಅವರ ಅಧಿಕಾರವಧಿ ಪೂರ್ಣಗೊಳ್ಳಲಿದೆ. ಈಗ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಯಾಗಿ ಆರ್.ಪ್ರಸನ್ನಕುಮಾರ್ ಕಣಕ್ಕಿಳಿದಿದ್ದಾರೆ.

ಉಮೇದುವಾರಿಕೆ ಸಲ್ಲಿಕೆ ಬಳಿಕ ಚುನಾವಣಾ ರಣತಂತ್ರದ ಕುರಿತು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಲಾಯಿತು.

ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮತದಾನ ಮಾಡಬಹುದಾಗಿದೆ. 4129 ಮತದಾರರು ಹಕ್ಕು ಚಲಾಯಿಸಬಹುದಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment