ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಹ್ಯಾಕಿಂಗ್ ವಿಚಾರ, ಶಿವಮೊಗ್ಗದಲ್ಲಿ ಗೃಹ ಸಚಿವರ ಹೇಳಿಕೆ, ಡಿಕೆಶಿಗೆ ತಿರುಗೇಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ನವೆಂಬರ್ 2021

ಯುವ ಕಾಂಗ್ರೆಸಿನ ಅನೇಕರು ನನಗೆ ಕರೆ ಮಾಡಿ ತಮ್ಮ ಅಧ್ಯಕ್ಷರ ಚುನಾವಣೆಯಲ್ಲಿ ನಡೆದ ಹ್ಯಾಕಿಂಗ್ ಆಗಿರುವ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಶ್ರೀಕಿ ಹ್ಯಾಕಿಂಗ್ ಕುರಿತು ಚರ್ಚೆಯಾಗುತ್ತಿದೆ. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್’ನ ಕೆಲವರು ಕರೆ ಮಾಡಿ ತಮ್ಮ ಅಧ್ಯಕ್ಷರ ಚನಾವಣೆ ಸಂದರ್ಭದಲ್ಲಿ ಹ್ಯಾಕಿಂಗ್ ಆಗಿರುವ ಸಾಧ್ಯತೆ ಇದೆ. ಇದನ್ನು ತನಿಖೆ ಮಾಡಿಸಲು ಸಾಧ್ಯವಾಗಲಿದೆಯೇ ಎಂದು ಕೇಳಿದ್ದರು. ದೂರು ನೀಡುವಂತೆ ನಾನು ತಿಳಿಸಿದ್ದೇನೆ ಎಂದರು.

‘ಡಿಕೆಶಿ ಮಾನಸಿಕ ಸ್ಥಿತಿ ಪರೀಕ್ಷಿಸಬೇಕು’

ಇನ್ನು, ಕಾಂಗ್ರೆಸ್ ಪಕ್ಷದ ರಾಜ್ಯಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮಾನಸಿಕ ಸ್ಥಿತಿ ಕುರಿತು ಟೀಕೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಆರಗ ಜ್ಞಾನೇಂದ್ರ, ಡಿ.ಕೆ.ಶಿವಕುಮಾರ್ ಅವರ ಮಾನಸಿಕ ಸ್ಥಿತಿಯನ್ನೇ ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ ಎಂದು ತಿರುಗೇಟು ನೀಡಿದರು.

ಗೃಹ ಸಚಿವರ ಹೇಳಿಕೆ ವಿಡಿಯೋ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment