ವಕೀಲನ ಮೇಲೆ ಸರ್ಕಲ್ ಇನ್ಸ್’ಪೆಕ್ಟರ್ ಹಲ್ಲೆ, ಸಾಗರದಲ್ಲಿ ಪೊಲೀಸ್ ವಿರುದ್ಧ ವಕೀಲರ ಪ್ರತಿಭಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ವಕೀಲರ ಸಂಘ ಪ್ರತಿಭಟನೆ ನಡೆಸಿತು. ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿತು.

ವಕೀಲ ಎಸ್.ಬಿ.ರಾಜೇಶ್ ಅವರ ಮೇಲೆ ಗ್ರಾಮಾಂತರ ಠಾಣೆ ಸಿಪಿಐ ಮಂಜುನಾಥ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು. ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ಸಮೀಪದ ಕ್ಯಾಂಟೀನ್’ನಲ್ಲಿ ವಕೀಲ ರಾಜೇಶ್ ಊಟ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಹೋಂ ಗಾರ್ಡ್ ಒಬ್ಬರು ಕ್ಯಾತೆ ತೆಗೆದು, ಜಗಳವಾಡಿದ್ದಾರೆ. ಮಧ್ಯಪ್ರವೇಶಿಸಿದ ಕ್ಯಾಂಟೀನ್ ಮಾಲೀಕ ನಾಗಭೂಷಣ್, ಜಗಳ ತಡೆಯುಲು ಪ್ರಯತ್ನಿಸಿದ್ದಾರೆ. ಸ್ಥಳಕ್ಕೆ ಬಂದ ಸಿಪಿಐ ಮಂಜುನಾಥ್, ವಕೀಲ ರಾಜೇಶ್ ಮತ್ತು ನಾಗಭೂಷಣ್ ಅವರನ್ನು ಬಲವಂತವಾಗಿ ಠಾಣೆಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಿಪಿಐ ಮಂಜುನಾಥ್ ಅವರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಮುಂದುವರೆಸಲಾಗುತ್ತದೆ ಎಂದು ವಕೀಲರ ಸಂಘದ ಅಧ್ಯಕ್ಷ ರವೀಶ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment