ಶಿವಮೊಗ್ಗದ ಉದ್ಯಮಿ ಮನೆ ಮೇಲೆ ಪೆಟ್ರೋಲ್ ಬಾಂಬ್ ಹಾಕ್ತೀನಿ ಅಂದವನು ಮುಂಬೈನಲ್ಲಿ ಅರೆಸ್ಟ್, ಆತನ ಮೇಲಿತ್ತು 53 ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021

ಉದ್ಯಮಿಯ ಮನೆ ಮೇಲೆ ಪೆಟ್ರೋಲ್ ಬಾಂಬ್ ಹಾಕಿ, ಮನೆಯಲ್ಲಿದ್ದವರನ್ನು ಹತ್ಯೆ ಮಾಡುವ ಬೆದರಿಕೆ ಒಡ್ಡಿದ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಈತನ ವಿರುದ್ಧ ಶಿವಮೊಗ್ಗದ ವಿವಿಧ ಠಾಣೆಯಲ್ಲಿ 53 ಪ್ರಕರಣ ದಾಖಲಾಗಿದ್ದವು. ರಾಜ್ಯದ ವಿವಿಧೆಡೆಯೂ ಈತನ ವಿರುದ್ಧ ಕೇಸ್’ಗಳಿವೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಏನಿದು ಪ್ರಕರಣ?

ಶಿವಮೊಗ್ಗದ ಶಾದ್ ನಗರದ ಉದ್ಯಮಿಯೊಬ್ಬರ ಮನೆ ಮೇಲೆ ಅಕ್ಟೋಬರ್ 20ರ ರಾತ್ರಿ ಕಲ್ಲು ತೂರಾಟ ನಡೆಸಲಾಗಿತ್ತು. ಮನೆ ಗೇಟು, ಬಾಗಿಲಿಗೆ ಕಲ್ಲು ಬಿದ್ದಿದ್ದವು. ಇದಾಗಿ ಕೆಲವೇ ಹೊತ್ತಿನಲ್ಲಿ ಉದ್ಯಮಿಗೆ ವಾಟ್ಸಪ್’ನಲ್ಲಿ ಕರೆ ಮಾಡಿದ್ದ ದುಷ್ಕರ್ಮಿಯೊಬ್ಬ, ಹಣಕ್ಕೆ ಬೇಡಿಕೆಯಿಟ್ಟಿದ್ದ. ಒಂದು ವೇಳೆ ಹಣ ಕೊಡದಿದ್ದರೆ ಮನೆ ಮೇಲೆ ಪಟ್ರೋಲ್ ಬಾಂಬ್ ದಾಳಿ ಮಾಡಲಾಗುತ್ತದೆ. ಮನೆಯಲ್ಲಿದ್ದವರ ಕೊಲೆ ಮಾಡುವುದಾಗಿ ಬೆದರಿಸಿದ್ದ.

ಮುಂಬೈನಲ್ಲಿ ಸಿಕ್ಕ ಬಚ್ಚನ್

ಪ್ರಕರಣ ತನಿಖೆಗೆ ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್ಸ್’ಪೆಕ್ಟರ್ ಸಂಜೀವ್ ಕುಮಾರ್ ಮತ್ತು ಕುಂಸಿ ಠಾಣೆ ಇನ್ಸ್’ಪೆಕ್ಟರ್ ಅಭಯ ಪ್ರಕಾಶ್ ಸೋಮನಾಳ್ ಅವರ ನೇತೃತ್ವದಲ್ಲಿ ಎರಡು ತಂಡ ರಚಿಸಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಮುಂಬೈನಲ್ಲಿ ಪ್ರಮುಖ ಆರೋಪಿ ಬಚ್ಚಾ ಅಲಿಯಾಸ್ ಬಚ್ಚನ್ ಅಲಿಯಾಸ್ ಜಮೀರ್ (29) ಎಂಬಾತನನ್ನು ಬಂಧಿಸಿದ್ದಾರೆ. ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಶಿವಮೊಗ್ಗ ಬಸವನಗುಡಿಯ ಮಹಮದ್ ತೌಹಿದ್ (19), ಮೊಹಮದ್ ಬಿಲಾಲ್ (21) ಎಂಬುವವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ | ಶಿವಮೊಗ್ಗದ ಉದ್ಯಮಿ ಮನೆ ಮೇಲೆ ರಾತ್ರೋರಾತ್ರಿ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆಯುವ ಬೆದರಿಕೆ

ಮೊಬೈಲು, ಕಾರು, ಡಾಂಗಲ್

ಬಂಧಿತರಿಂದ ಶಿವಮೊಗ್ಗ ಪೊಲೀಸರು ಮೂರು ಮೊಬೈಲ್ ಫೋನ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಮೂರು ಇಂಟರ್’ನೆಟ್ ಡಾಂಗಲ್ ಕೂಡ ಸೀಜ್ ಮಾಡಿಕೊಂಡಿದ್ದಾರೆ. ಒಂದು ಕಾರನ್ನು ಕೂಡ ಸೀಜ್ ಮಾಡಲಾಗಿದೆ.

shivamogga live subscribe band

ಸಾಮಾನ್ಯನಲ್ಲ ಈ ಬಚ್ಚನ್

ಕೊಲೆ ಬೆದರಿಕೆಯೊಡ್ಡಿ ಹಣ ವಸೂಲಿ ಮಾಡುವ ಕೃತ್ಯದಲ್ಲಿ ಬಚ್ಚನ್ ಹೆಸರು ಆಗಾಗ ಕೇಳಿ ಬರುತಿತ್ತು. ರಾಜ್ಯದ ವಿವಿಧೆಡೆ ಈತನ ವಿರುದ್ಧ ಕೊಲೆ ಬೆದರಿಕೆ, ಮಾರಣಾಂತಿಕ ಹಲ್ಲೆ, ವಂಚನೆ, ಶಸ್ತ್ರಾಸ್ತ್ರ ಕಾಯ್ದೆ, ದರೋಡೆ ಪ್ರಕರಣಗಳು ದಾಖಲಾಗಿವೆ.

ADVT JULY NANJAPPA HOSPITAL HOME LAB TESTING

ಬಚ್ಚನ್ ಅಲಿಯಾಸ್ ಬಚ್ಚಾ ಅಲಿಯಾಸ್ ಜಮೀರ್ ವಿರುದ್ಧ ಶಿವಮೊಗ್ಗದ ವಿವಿಧ ಠಾಣೆಗಳಲ್ಲಿ 53 ಪ್ರಕರಣ ದಾಖಲಾಗಿವೆ. ತುಂಗಾನಗರ ಠಾಣೆಯಲ್ಲಿ 50 ಪ್ರಕರಣ, ದೊಡ್ಡಪೇಟೆ ಠಾಣೆಯಲ್ಲಿ ಒಂದು ಪ್ರಕರಣ, ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿವೆ.

ಬಚ್ಚನ್ ವಿಚಾರಣೆ ನಡೆಯುತ್ತಿದ್ದು, ವಿವಿಧ ಪ್ರಕರಣಗಳ ಕುರಿತು ಮಹತ್ವದ ವಿಚಾರಗಳು ತಿಳಿದು ಬರುವ ಸಾಧ್ಯತೆ ಇದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 22, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment