ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ನವೆಂಬರ್ 2021
ಶಿವಮೊಗ್ಗದಲ್ಲಿರುವ ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಅವರ ಎರಡು ಮನೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ನಡೆಸುತ್ತಿದ್ದ ಶೋಧ ಕಾರ್ಯ ಪೂರ್ಣಗೊಂಡಿದೆ. ಈತನಕ ಪತ್ತೆಯಾಗಿರುವ ಚಿನ್ನಾಭರಣ, ವಾಹನಗಳು, ಆಸ್ತಿ ಮತ್ತು ನಗದು ಕುರಿತು ಅಧಿಕೃತ ಪ್ರಕಟಣೆ ಹೊರಬಿದ್ದಿದೆ.
ಟಿ.ಎಸ್.ರುದ್ರೇಶಪ್ಪಗೆ ಸೇರಿದ 2 ಮನೆಗಳು, ವಿವಿಧ ಕಡೆಗಳಲ್ಲಿ ನಾಲ್ಕು ನಿವೇಶನಗಳು ಪತ್ತೆಯಾಗಿವೆ.
ಶೋಧ ಕಾರ್ಯದ ವೇಳೆ 9 ಕೆ.ಜಿ. 400 ಗ್ರಾಂ ತೂಕದ ಚಿನ್ನದ ಬಿಸ್ಕೇಟ್ ಹಾಗೂ ಆಭರಣ, ಮೂರು ಕೆ.ಜಿ ತೂಕದ ಬೆಳ್ಳಿ ವಸ್ತುಗಳು ಸಿಕ್ಕಿವೆ.
ಎರಡು ಕಾರುಗಳು, ಮೂರು ದ್ವಿಚಕ್ರ ವಾಹನಗಳು ಕೂಡ ಪತ್ತೆಯಾಗಿವೆ.
ಇನ್ನು, ಎಂಟು ಎಕರೆ ಕೃಷಿ ಭೂಮಿಯ ದಾಖಲೆಗಳು ಕೂಡ ಶೋಧ ಕಾರ್ಯದ ವೇಳೆ ಸಿಕ್ಕಿದೆ.
ಮನೆಗಳಲ್ಲಿ 15.94 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ.
ಇನ್ನು, ಮನೆಯಲ್ಲಿ ಸುಮಾರು 20 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ.
ತನಿಖೆ ಮುಂದುವರೆದಿದ್ದು, ವಿಚಾರಣೆ ಮುಂದುವರೆದಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200