ಶಿವಮೊಗ್ಗದ ಎರಡು ಮನೆಗಳ ಮೇಲೆ ಎಸಿಬಿ ದಾಳಿ ಕಂಪ್ಲೀಟ್, ಎಷ್ಟು ಕೆಜಿ ಚಿನ್ನ ಸಿಕ್ತು? ಪತ್ತೆಯಾದ ಹಣ, ಆಸ್ತಿ ವಿವರವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ನವೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದಲ್ಲಿರುವ ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಅವರ ಎರಡು ಮನೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ನಡೆಸುತ್ತಿದ್ದ ಶೋಧ ಕಾರ್ಯ ಪೂರ್ಣಗೊಂಡಿದೆ. ಈತನಕ ಪತ್ತೆಯಾಗಿರುವ ಚಿನ್ನಾಭರಣ, ವಾಹನಗಳು, ಆಸ್ತಿ ಮತ್ತು ನಗದು ಕುರಿತು ಅಧಿಕೃತ ಪ್ರಕಟಣೆ ಹೊರಬಿದ್ದಿದೆ.

ADVT JULY NANJAPPA HOSPITAL HOME LAB TESTING

ಟಿ.ಎಸ್.ರುದ್ರೇಶಪ್ಪಗೆ ಸೇರಿದ 2 ಮನೆಗಳು, ವಿವಿಧ ಕಡೆಗಳಲ್ಲಿ ನಾಲ್ಕು ನಿವೇಶನಗಳು ಪತ್ತೆಯಾಗಿವೆ.

ಶೋಧ ಕಾರ್ಯದ ವೇಳೆ 9 ಕೆ.ಜಿ. 400 ಗ್ರಾಂ ತೂಕದ ಚಿನ್ನದ ಬಿಸ್ಕೇಟ್ ಹಾಗೂ ಆಭರಣ, ಮೂರು ಕೆ.ಜಿ ತೂಕದ ಬೆಳ್ಳಿ ವಸ್ತುಗಳು ಸಿಕ್ಕಿವೆ.

ಎರಡು ಕಾರುಗಳು, ಮೂರು ದ್ವಿಚಕ್ರ ವಾಹನಗಳು ಕೂಡ ಪತ್ತೆಯಾಗಿವೆ.

ಇನ್ನು, ಎಂಟು ಎಕರೆ ಕೃಷಿ ಭೂಮಿಯ ದಾಖಲೆಗಳು ಕೂಡ ಶೋಧ ಕಾರ್ಯದ ವೇಳೆ ಸಿಕ್ಕಿದೆ.

ಮನೆಗಳಲ್ಲಿ 15.94 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ.

ಇನ್ನು, ಮನೆಯಲ್ಲಿ ಸುಮಾರು 20 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ.

ತನಿಖೆ ಮುಂದುವರೆದಿದ್ದು, ವಿಚಾರಣೆ ಮುಂದುವರೆದಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ತಿಳಿಸಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment