ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಡಿಸೆಂಬರ್ 2021
ಶಿವಮೊಗ್ಗದ ಕೃಷಿ ವಿಶ್ವವಿದ್ಯಾಲಯದ ಕ್ಯಾಂಪಸ್’ನಲ್ಲಿ ಇವತ್ತು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಯೊಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಬಾಡಿಗೆ ವಾಹನದ ಹಣ ಬಿಡುಗಡೆಗೆ ಲಂಚ ಕೇಳಿದ ಕೃಷಿ ವಿವಿ ಹಣಕಾಸು ಅಧಿಕಾರಿಯನ್ನು ಎಸಿಬಿ ಅಧಿಕಾರಿಗಳು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ವಿವಿಯ ಹಣಕಾಸು ವಿಭಾಗದ ಗಣೇಶಪ್ಪ ಬಂಧಿತ.
ಕೃಷಿ ವಿವಿಯಲ್ಲಿ ನವೀನ್ ಎಂಬುವವರು ವಾಹನಗಳನ್ನು ಬಾಡಿಗೆಗೆ ಬಿಟ್ಟಿದ್ದರು. ಅದರ ಹಣವನ್ನು ಬಿಡುಗಡೆ ಮಾಡಬೇಕಿತ್ತು.
1 ಲಕ್ಷ ಬಿಲ್ ಬಿಡುಗಡೆಗೆ ಗಣೇಶಪ್ಪ 5 ಸಾವಿರ ಲಂಚ ಡಿಮ್ಯಾಂಡ್ ಮಾಡದ್ದರು. 5 ಸಾವಿರ ರೂ. ಹಣ ಪಡೆಯುವಾಗ ಸೂಕ್ತ ಮಾಹಿತಿ ಆಧಾರದ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಗಣೇಶಪ್ಪನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200