ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಡಿಸೆಂಬರ್ 2021
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಅವರ ಜಾಮೀನು ಅರ್ಜಿಯನ್ನು ಶನಿವಾರ ವಜಾಗೊಳಿಸಲಾಗಿದೆ. ರುದ್ರೇಶಪ್ಪ ಅವರನ್ನು ಡಿಸೆಂಬರ್ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ನ.25ರಂದು ಎಸಿಬಿ ದಾಳಿ ಮಾಡಿ ಶಿವಮೊಗ್ಗದ ಎರಡು ಮನೆಗಳನ್ನು ಪರಿಶೀಲಿಸಿದಾಗ 9.50 ಕೆಜಿ ಚಿನ್ನಾಭರಣ, ಲಕ್ಷಾಂತರ ನಗದು ಸೇರಿ ವೇತನಕ್ಕಿಂತಲೂ ಶೇ.400ರಷ್ಟು ಹೆಚ್ಚು ಆಸ್ತಿ ಹೊಂದಿರುವುದು ಕಂಡುಬಂದಿದೆ.
ಈ ಕಾರಣಕ್ಕಾಗಿ ಅವರನ್ನು ಡಿ.7ರವರೆಗೆ ನ್ಯಾಯಾಂಗಕ್ಕೆ ಬಂಧನಕ್ಕೆ ನೀಡಲಾಗಿದೆ. ಆದರೆ, ರುದ್ರೇಶಪ್ಪ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಮತ್ತು ಸೆಷನ್ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಎಸಿಬಿ ದಾಳಿ, ರುದ್ರೇಶಪ್ಪನ ಬ್ಯಾಂಕ್ ಲಾಕರ್ ಶೋಧ, ಆದಾಯಕ್ಕಿಂತಲೂ ಶೇ.400ರಷ್ಟು ಹೆಚ್ಚು ಸಂಪಾದನೆ ಧೃಡ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






