ಶಿವಮೊಗ್ಗ ಲೈವ್.ಕಾಂ | SORABA NEWS | 7 ಡಿಸೆಂಬರ್ 2021
ಜಿಂಕೆ ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದ ಆಡ್ಡೆಯ ಮೇಲೆ ಆನವಟ್ಟಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಒಬ್ಬನನ್ನು ಬಂಧಿಸಿದ್ದು ನಾಲ್ವರು ಪರಾರಿಯಾಗಿದ್ದಾರೆ.
ಸೊರಬ ತಾಲೂಕು ಆನವಟ್ಟಿ ವಲಯದ ತವನಂದಿ ಶಾಖೆಯ ಕೆರೆಕೊಪ್ಪ ಗ್ರಾಮದ ಸ.ನಂ.13ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ, ಆಕ್ರಮವಾಗಿ ಜಿಂಕೆ ಬೇಟೆಯಾಡಿ ಮಾಂಸ ತಯಾರಿಸುಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಕೆರೆಕೊಪ್ಪ ಗ್ರಾಮದ ನಾರಾಯಣಪ್ಪ ಎಂಬಾತನನ್ನು ಬಂಧಿಸಲಾಗಿದೆ.
ಜಿಂಕೆ ತಲೆ ಸೇರಿ ಮಾಂಸ, 2 ಕತ್ತಿ, 2 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ಬೂದ್ಯಪ್ಪ, ನಾಗಪ್ಪ, ಆಸೀಫ್, ಆಲಿ ಸಾಬ್ ಫೈಜಾನ್ ಸಾಬ್ ಎಂಬುವವರು ತಲೆಮರೆಸಿಕೊಂಡಿದ್ದಾರೆ.
ಸೊರಬ ಎಸಿಎಫ್ ಪ್ರವೀಣ್ ಕುಮಾರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.