ಶರಾವತಿ ಹಿನ್ನೀರು, ಸಿಗಂದೂರು ಲಾಂಚ್ ಪ್ರವಾಸಿಗರಿಗಷ್ಟೇ ಸ್ವರ್ಗ, ಕಳೆದ ರಾತ್ರಿಯ ಘಟನೆ ತುಮರಿ ಜನರಲ್ಲಿ ಹೆಚ್ಚಿಸಿದೆ ಆತಂಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021

ಘಟನೆ 1 : ಹೆರಿಗೆ ನೋವಿನಿಂದ ಬಳಲಿಕೆ

ಸಂಜೆ 6 ಗಂಟೆಗೆ ಚದರವಳ್ಳಿ ಗ್ರಾಮದ ಚೈತ್ರಾ ಅವರಿಗೆ ಹೆರಿಗೆ ನೋವು ಶುರುವಾಯ್ತು. ಕುಟುಂಬದವರು 108 ಆಂಬುಲೆನ್ಸ್’ಗೆ ಕರೆ ಮಾಡಿದರು. ರಾತ್ರಿಯಾದರೂ ಆಂಬುಲೆನ್ಸ್ ಸುಳಿವಿಲ್ಲ. ಹೆರಿಗೆ ನೋವಿನಿಂದ ನರಳುತ್ತಿದ್ದ ಚೈತ್ರಾ ಅವರನ್ನು ಕಾರೊಂದರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ರಾತ್ರಿ ಹೆರಿಗೆಯಾಯ್ತು. ಹೆಚ್ಚಿನ ಚಿಕಿತ್ಸೆಗೆ ನಡುರಾತ್ರಿ ಹೊತ್ತಿಗೆ ಸಾಗರದ ಆಸ್ಪತ್ರೆಗೆ ಕಳುಹಿಸಲಾಯಿತು. ಬೆಳಗಾಗುವುದರಲ್ಲಿ ಮಗು ಸಾವನ್ನಪ್ಪಿದೆ.

ADVT JULY NANJAPPA HOSPITAL HOME LAB TESTING

ಘಟನೆ 2 : ಅಪಘಾತದಲ್ಲಿ ತಲೆಗೆ ಗಾಯ

ತುಮರಿ ಸಮೀಪ ರಾತ್ರಿ ಬೈಕ್ ಸವಾರರಿಬ್ಬರು ದನವೊಂದಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದರು. ಸವಾರರೊಬ್ಬರ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವ ಉಂಟಾಗುತಿತ್ತು. ನೋವು ತಾಳಲಾರದೆ ಒದ್ದಾಡುತ್ತಿದ್ದರು. ಕೂಡಲೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಅದೆ ಹೊತ್ತಿಗೆ ಹೆರಿಗೆ ನಡೆಯುತಿತ್ತು.

ಇವರೆಡು ಬುಧವಾರ ರಾತ್ರಿ ತುಮರಿ ಭಾಗದಲ್ಲಿ ಒಂದೇ ಸಮಯಕ್ಕೆ ಸಂಭವಿಸಿದ ಮನ ಕಲಕುವ ಘಟನೆಗಳು. 108 ಆಂಬುಲೆನ್ಸ್ ಇದ್ದಿದ್ದರೆ ಚೈತ್ರಾ ಅವರ ಹೆಣ್ಣು ಮಗು ಅವರ ಮಡಿಲಲ್ಲಿರುತ್ತಿತ್ತು. ಕುಟುಂಬದವರು ಸಂತಸದಲ್ಲಿರುತ್ತಿದ್ದರು. ಅಪಘಾತದಲ್ಲಿ ಗಾಯಗೊಂಡವರಿಗೆ ಕೂಡಲೆ ಪ್ರಾಥಮಿಕ ಚಿಕಿತ್ಸೆ ಲಭಿಸಿ, ನೋವು, ನರಳಾಟ ಕಡಿಮೆಯಾಗುತ್ತಿತ್ತು.

ಸಂಜೆಯಾಗುತ್ತಿದ್ದಂತೆ ಎಲ್ಲವೂ ಬದಲು

ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಬೆಳಗ್ಗೆಯಿಂದ ಸಂಜೆವರೆಗೂ ತುಮರಿ, ಸಿಗಂದರೂ ಭಾಗದಲ್ಲಿ ನೂರಾರು ವಾಹನಗಳು, ಜನ ಜಂಗುಳಿ ಇರುತ್ತದೆ. ಆದರೆ ಸಂಜೆಯಾಗುತ್ತಿದ್ದಂತೆ ಈ ಪ್ರದೇಶ ಕರಾಳ ರೂಪ ಪಡೆಯುತ್ತದೆ. ಜನರ ಜೀವಕ್ಕಿಲ್ಲಿ ಬೆಲೆಯೇ ಇಲ್ಲವಾಗುತ್ತದೆ. ಅದಕ್ಕೆ ಉದಾಹರಣೆ ಕಳೆದ ರಾತ್ರಿ ನಡೆದ ಎರಡು ಘಟನೆಗಳು.

shivamogga live subscribe New Kannada

ಆರೋಗ್ಯ ಸಮಸ್ಯೆ, ಅಪಘಾತ ಸಂಭವಿಸಿದರೆ ಪ್ರಾಥಮಿಕ ಚಿಕಿತ್ಸೆಗಾಗಿ ತುಮರಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಆದರೆ ಸಂಜೆಯಾಗುತ್ತಿದ್ದಂತೆ ಡ್ಯೂಟಿ ಡಾಕ್ಟರ್ ಮನೆಗೆ ತೆರಳುತ್ತಾರೆ. ಇಬ್ಬರು ನರ್ಸಿಂಗ್ ಸಿಬ್ಬಂದಿ ಮಾತ್ರ ಕರ್ತವ್ಯದಲ್ಲಿರುತ್ತಾರೆ. ತುರ್ತು ಸಂದರ್ಭ ಈ ಸಿಬ್ಬಂದಿಯೇ ಎಲ್ಲಾ ಚಿಕಿತ್ಸೆ ನೀಡಬೇಕಾಗುತ್ತದೆ.

ಲಾಂಚ್ ಇಲ್ಲದಿದ್ದರೆ ಹೊರಜಗತ್ತು ದೂರ

ಸಿಗಂದೂರು, ಶರಾವತಿ ಹಿನ್ನೀರಿನ ಮೇಲೆ ತೇಲುವ ಲಾಂಚ್ ಪ್ರವಾಸಿಗರ ಪಾಲಿಗೆ ಸ್ವರ್ಗದ ಅನುಭವ ನೀಡುತ್ತದೆ. ಆದರೆ ಸಂಜೆ 6 ಗಂಟೆ ಬಳಿಕ ಲಾಂಚ್ ಸೇವೆ ಸ್ಥಗಿತವಾಗುತ್ತದೆ. ಆ ಬಳಿಕ ಇಲ್ಲಿನ ನಿವಾಸಿಗಳಿಗೆ ಹೊರ ಜಗತ್ತು ಬಹಳ ದೂರವಾಗಿಬಿಡುತ್ತದೆ. ಸಾಗರದ ಆಸ್ಪತ್ರೆಗೆ ತೆರಳಲು 120 ಕಿ.ಮೀ ಸುತ್ತಿಕೊಂಡು ಬರಬೇಕು. ಗರ್ಭಿಣಿಯರು, ಅಪಘಾತದಲ್ಲಿ ಗಾಯಗೊಂಡವರು, ಕಾಯಿಲೆಗೆ ತುತ್ತಾದವರು ಖಾಸಗಿ ವಾಹನಗಳಲ್ಲಿ 120 ಕಿ.ಮೀ ಸಂಚರಿಸುವುದು ಸುಲಭದ ಮಾತಲ್ಲ. ಇದೆ ಕಾರಣಕ್ಕೆ ಇಲ್ಲಿಗೆ ಆಂಬುಲೆನ್ಸ್ ಅವಶ್ಯತೆ ಇದೆ.

AVvXsEi1gI9L5sBIE1BcW6NrDJyoz4AIt0F9XaspiieA8nXVzMuUX47MDuYCmujelSlb9qSM6BC3Av8rqYRjuaGMbPODa3eNNGdbJs6UKFK6RojefBRisyK i KMs0wMj7sz776c9sFYhtGjTnjgDwjeXh3KsjIekJykiKH8nnONw 9JPYD8W87sjI1vT2EZtw=s926

ಹೋರಾಟ ಮಾಡಿ ಆಂಬುಲೆನ್ಸ್ ಪಡೆದಿದ್ದರು

ತುಮರಿ ಸುತ್ತಮುತ್ತ ಸುಮಾರು 20 ಸಾವಿರ ಜನ ಸಂಖ್ಯೆ ಇದೆ. ಇಷ್ಟೂ ಜನಕ್ಕೆ ಇದ್ದದ್ದು ಒಂದೇ 108 ಆಂಬುಲೆನ್ಸ್. 2014ಕ್ಕೂ ಮೊದಲು ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಇರಲಿಲ್ಲ. ತುರ್ತು ಸಂದರ್ಭ ಕಾರ್ಗಲ್’ನಿಂದ ಆಂಬುಲೆನ್ಸ್ ಬರಬೇಕಿತ್ತು. ಜನರು ಸಾಲು ಸಾಲು ಪ್ರತಿಭಟನೆಗಳನ್ನು ನಡೆಸಿ ಒಂದು ಆಂಬುಲೆನ್ಸ್ ಮಂಜೂರು ಮಾಡಿಸಿಕೊಂಡಿದ್ದರು. ಆದರೆ ಅದೂ ಈಗ ಕಾಣೆಯಾಗಿದೆ.

108 ಆಂಬುಲೆನ್ಸ್’ಗೆ ನೂರೆಂಟು ವಿಘ್ನ

ಕಳೆದೊಂದು ತಿಂಗಳಿಂದ ತುಮರಿಯಿಂದ 108 ಆಂಬುಲೆನ್ಸ್ ಕಣ್ಮರೆಯಾಗಿದೆ. ರಿಪೇರಿಯ ನೆಪವೊಡ್ಡಿ ತುಮರಿಯಿಂದ ತೆರಳಿದ ಆಂಬುಲೆನ್ಸ್ ಮತ್ತೆ ಹಿಂತಿರುಗಿಲ್ಲ. ಬದಲಿ ವ್ಯವಸ್ಥೆ ಮಾಡಿ ಎಂದು ಜನರ ಬೇಡಿಕೊಂಡರೂ ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ. ಜನಪ್ರತಿನಿಧಿಗಳು ಗಮನ ಹರಿಸುತ್ತಿಲ್ಲ. ತುರ್ತಾಗಿ ಅಂಬುಲೆನ್ಸ್ ಬೇಕು ಎಂದು 108ಕ್ಕೆ ಡಯಲ್ ಮಾಡಿದರೆ ಕಾರ್ಗಲ್’ನಿಂದ ಆಂಬುಲೆನ್ಸ್ ಬರಬೇಕು. ಅದು ಇಲ್ಲದಿದ್ದರೆ ಈ ಭಾಗದ ಜನರು ಸಾವು ಬದುಕಿನ ನಡುವೆ ಹೋರಾಟ ನಡೆಸಿಕೊಂಡು ಸಾಗರ ತಲುಪಬೇಕು. ಇದೆ ಕಾರಣಕ್ಕೆ ಕಳೆದ ರಾತ್ರಿ ಹಸುಗೂಸು ಕಣ್ಣು ಬಿಡುವ ಮೊದಲೆ ಇಹಲೋಕ ಯಾತ್ರ ಮುಗಿಸಿದೆ.

ಆಂಬುಲೆನ್ಸ್’ಗಾಗಿ ಮತ್ತೆ ಹೋರಾಟದ ಎಚ್ಚರಿಕೆ

ಚದುರವಳ್ಳಿ ಚೈತ್ರಾ ಅವರಿಗೆ ಹೆರಿಗೆ ಮಾಡಿಸಿ, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಕಾರಿನಲ್ಲಿ ಸಾಗರ ಆಸ್ಪತ್ರೆಗೆ ಕಳುಹಿಸಲಾಯಿತು. ರಾತ್ರಿ 10 ಗಂಟೆ ಹೊತ್ತಿಗೆ ಲಾಂಚ್ ಸಿಬ್ಬಂದಿ ಲಾಂಚ್ ಓಡಿಸಿ ಮಗು, ಬಾಣಂತಿಯನ್ನು ಮತ್ತೊಂದು ದಡಕ್ಕೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಒಂದು ವೇಳೆ ಆಂಬುಲೆನ್ಸ್ ಇದ್ದಿದ್ದರೆ ಇವತ್ತು ಚಿತ್ರಣ ಬೇರೆಯದ್ದೆ ಇರುತ್ತಿತ್ತು. ಕಳೆದೊಂದು ತಿಂಗಳಿಂದ ಆಂಬುಲೆನ್ಸ್ ಇಲ್ಲದಿರುವುದರಿಂದ ಹಲವರು ಸಮಸ್ಯೆ ಅನುಭವಿಸಿದ್ದಾರೆ. ಇನ್ನಷ್ಟು ಸಮಸ್ಯೆಗೂ ಮೊದಲು ಆಂಬುಲೆನ್ಸ್ ಒದಗಿಸಬೇಕು ಎಂದು ಜನರು ಪಟ್ಟು ಹಿಡಿದಿದ್ದಾರೆ.

AVvXsEgs2CAQQwFXPEeKJ0M8TIYSuTjC1YFP87yReiHpVPmRryODfVeCXuFAqftB8kOZ5mPWZitv CEgSxJ 0UftK 3Xtg FQnjiLvzYXdPYIyMcbnCizoegDYgVDMGV3v1L2lUIeE2 3X339z1W9X2I3kEIgBbfYiP ZYP9tZPaJV64qH Ith d6U8fBL4P5A=s926

‘ಆಂಬುಲೆನ್ಸ್’ಗಾಗಿ ಶುಕ್ರವಾರ ತುಮರಿ ಪ್ರಾಥಮಿಕ ಆರೋಗ್ಯದ ಕೇಂದ್ರದ ಮುಂದೆ ಹೋರಾಟ ಮಾಡುತ್ತೇವೆ. ಇಷ್ಟೆಲ್ಲ ಆದರೂ ಜನ ಪ್ರತಿನಿಧಿಗಳು, ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ’ ಎಂದು ತುಮರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ಅವರು ಬೇಸರ ವ್ಯಕ್ತಪಡಿಸಿದ್ದ್ದಾರೆ. ಶರಾವತಿ ಹಿನ್ನೀರಿನ ದ್ವೀಪದ ಜನರ ಬವಣೆಗೆ ಆದಷ್ಟು ಬೇಗ ಮುಕ್ತಿ ಸಿಗಬೇಕಿದೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ 108 ಆಂಬುಲೆನ್ಸ್’ಗೆ ಪರ್ಯಾಯ ವ್ಯವಸ್ಥೆ ಮಾಡುವತ್ತ ಯೋಚಿಸಬೇಕಿದೆ.

ಸಿಗಂದೂರು ದೇವಸ್ಥಾನ, ಇಲ್ಲಿಯ ಪ್ರಕೃತಿ ಸೊಬಗು, ಶರಾವತಿ ಹಿನ್ನೀರು, ಅದರ ಮೇಲೆ ತೇಲುವ ಲಾಂಚ್’ಗಳು ಪ್ರವಾಸಿಗರ ಪಾಲಿಗೆ ಸ್ವರ್ಗದ ಅನುಭವ ನೀಡುತ್ತದೆ. ಆದರೆ ಇಲ್ಲಿನ ವಾಸಿಗಳಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸದೆ ಸರ್ಕಾರ ಈ ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 16, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment