ಭದ್ರಾವತಿಯಲ್ಲಿ ಬೈಕ್ ಸವಾರರ ಬ್ಯಾಗ್’ನಲ್ಲಿ ಸಿಕ್ತು ರಾಶಿ ರಾಶಿ ಮೊಬೈಲ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಡಿಸೆಂಬರ್ 2021

ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ ಬೈಕ್ ಸವಾರರನ್ನು ಹಿಡಿದು, ಕೈಯಲ್ಲಿದ್ದ ಬ್ಯಾಗ್ ತಪಾಸಣೆಗೆ ಒಳಪಡಿಸಿದಾಗ ರಾಶಿ ರಾಶಿ ಮೊಬೈಲ್ ಪತ್ತೆಯಾಗಿವೆ. ಕಳ್ಳರನ್ನು ಬಂಧಿಸಿದ ಪೊಲೀಸರು ಮೊಬೈಲ್’ಗಳನ್ನು ವಶಕ್ಕೆ ಪಡೆದಿದ್ದಾರೆ.

AVvXsEgs2CAQQwFXPEeKJ0M8TIYSuTjC1YFP87yReiHpVPmRryODfVeCXuFAqftB8kOZ5mPWZitv CEgSxJ 0UftK 3Xtg FQnjiLvzYXdPYIyMcbnCizoegDYgVDMGV3v1L2lUIeE2 3X339z1W9X2I3kEIgBbfYiP ZYP9tZPaJV64qH Ith d6U8fBL4P5A=s926

ಭದ್ರಾವತಿ ಹೊಸಮನೆ ಬಡಾವಣೆಯ ಸಿ.ಶ್ರೀನಿವಾಸ್ (26) ಮತ್ತು ದುರ್ಗಿನಗರದ ಅಜಾಮ್ ಅಲಿಯಾಸ್ ಬಾಬು (38) ಬಂಧಿತರು.

ಬ್ಯಾಗ್’ನಲ್ಲಿತ್ತು ರಾಶಿ ರಾಶಿ ಮೊಬೈಲ್

ಮೊಬೈಲ್ ಕಳ್ಳರ ಕುರಿತು ಖಚಿತ ಮಾಹಿತಿ ಮೇರೆಗೆ, ಪೊಲೀಸರು ಭದ್ರಾವತಿಯ ಸೀಗೆಬಾಗಿ ಗಣಪತಿ ದೇಗುಲದ ಬಳಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ಬೈಕ್’ನಲ್ಲಿ ಬಂದ ಇಬ್ಬರು ಯುವಕರು ಪೊಲೀಸರನ್ನು ಕಂಡು ಪರಾರಿಯಾಗಿಲು ಯತ್ನಿಸಿದ್ದಾರೆ. ಇವರನ್ನು ಹಿಡಿದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಇವರ ಬಳಿ ಇದ್ದ ಬ್ಯಾಗ್ ಪರಿಶೀಲನೆ ನಡೆಸಿದಾಗ ರಾಶಿ ರಾಶಿ ಮೊಬೈಲ್ ಪತ್ತೆಯಾಗಿದೆ.

10 ಲಕ್ಷದ ಮೊಬೈಲ್, ಲ್ಯಾಪ್ ಟಾಪ್

ಬ್ಯಾಗ್’ನಲ್ಲಿ ವಿವಿಧ ಕಂಪನಿಗಳ 120ಕ್ಕೂ ಹೆಚ್ಚು ಮೊಬೈಲ್ ಪತ್ತೆಯಾಗಿವೆ. ಇವುಗಳ ಮೌಲ್ಯ 10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇನ್ನು, ಬ್ಯಾಗ್’ನಲ್ಲಿ ಸುಮಾರು 20 ಸಾವಿರ ಮೌಲ್ಯದ ಡೆಲ್ ಕಂಪನಿಯ ಲ್ಯಾಪ್ ಟಾಪ್ ಸಿಕ್ಕಿದೆ.

shivamogga live subscribe New Kannada

ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ ಡಿಯೋ ಬೈಕನ್ನು ವಶಕ್ಕೆ ಪಡೆದಿದ್ದಾರೆ.

ಸಿಪಿಐ ರಾಘವೇಂದ್ರ ಕಾಂಡಿಕೆ ಮಾರ್ಗದರ್ಶನದಲ್ಲಿ ಎ.ಎಸ್.ಐ ಮಹೇಶ್ವರ ನಾಯ್ಕ, ಸಿಬ್ಬಂದಿ ವಿಜಯಕುಮಾರ್, ಪ್ರಸನ್ನ ಸ್ವಾಮಿ, ನವೀನ್ ಪವಾರ್, ಹಾಲಪ್ಪ, ನಾರಾಯಣ ಸ್ವಾಮಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ADVT JULY NANJAPPA HOSPITAL HOME LAB TESTING

.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 17, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment