ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021
ಸೇವೆ ಖಾಯಂಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಶಿವಮೊಗ್ಗದಲ್ಲಿ ವಿಭಿನ್ನ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ಮಾಡಿ ಪ್ರತಿಭಟಿಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ನಡೆಸಲಾಯಿತು. ವಿವಿಧ ಕೆಲಸದ ನಿಮಿತ್ತ ಡಿಸಿ ಕಚೇರಿ, ತಾಲೂಕು ಕಚೇರಿಗೆ ಬಂದಿದ್ದವರಿಗೆ ಮಜ್ಜಿಗೆ ವಿತರಿಸಲಾಯಿತು. ಪ್ರತಿ ಗ್ಲಾಸ್’ಗೆ ಐದು ರೂ.ನಂತೆ ಸಂಗ್ರಹಿಸಿ ಮಜ್ಜಿಗೆ ಮಾರಾಟ ಮಾಡಲಾಯಿತು.
ಸೇವೆ ಖಾಯಂಗೆ ಆಗ್ರಹ
ಸೇವೆ ಖಾಯಂಗೆ ಒತ್ತಾಯಿಸಿ ಅತಿಥಿ ಉಪನ್ಯಾಸರು ಬಹುವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈವರೆಗೂ ಸರ್ಕಾರ ಯಾವುದೆ ಕ್ರಮ ಕೈಗೊಂಡಿಲ್ಲ. ಬೆಳಗಾವಿ ಅಧಿವೇಶನದ ಸಂದರ್ಭ ಸಾವಿರಾರು ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷ ಸೋಮಶೇಖರ ಶಿವಮೊಗ್ಗಿ ತಿಳಿಸಿದರು.
ಇದೆ ವೇಳೆ ತಮ್ಮ ಸೇವೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

LATEST NEWS
- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

About The Editor
ನಿತಿನ್ ಆರ್.ಕೈದೊಟ್ಲು
















