ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021
ಸೇವೆ ಖಾಯಂಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಶಿವಮೊಗ್ಗದಲ್ಲಿ ವಿಭಿನ್ನ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ಮಾಡಿ ಪ್ರತಿಭಟಿಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ನಡೆಸಲಾಯಿತು. ವಿವಿಧ ಕೆಲಸದ ನಿಮಿತ್ತ ಡಿಸಿ ಕಚೇರಿ, ತಾಲೂಕು ಕಚೇರಿಗೆ ಬಂದಿದ್ದವರಿಗೆ ಮಜ್ಜಿಗೆ ವಿತರಿಸಲಾಯಿತು. ಪ್ರತಿ ಗ್ಲಾಸ್’ಗೆ ಐದು ರೂ.ನಂತೆ ಸಂಗ್ರಹಿಸಿ ಮಜ್ಜಿಗೆ ಮಾರಾಟ ಮಾಡಲಾಯಿತು.
ಸೇವೆ ಖಾಯಂಗೆ ಆಗ್ರಹ
ಸೇವೆ ಖಾಯಂಗೆ ಒತ್ತಾಯಿಸಿ ಅತಿಥಿ ಉಪನ್ಯಾಸರು ಬಹುವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈವರೆಗೂ ಸರ್ಕಾರ ಯಾವುದೆ ಕ್ರಮ ಕೈಗೊಂಡಿಲ್ಲ. ಬೆಳಗಾವಿ ಅಧಿವೇಶನದ ಸಂದರ್ಭ ಸಾವಿರಾರು ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷ ಸೋಮಶೇಖರ ಶಿವಮೊಗ್ಗಿ ತಿಳಿಸಿದರು.
ಇದೆ ವೇಳೆ ತಮ್ಮ ಸೇವೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.