ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ಮಾಡಿದ ಉಪನ್ಯಾಸಕರು, ವಿಭಿನ್ನ ಪ್ರತಿಭಟನೆಗೆ ಕಾರಣವೇನು?

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021

ಸೇವೆ ಖಾಯಂಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಶಿವಮೊಗ್ಗದಲ್ಲಿ ವಿಭಿನ್ನ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ಮಾಡಿ ಪ್ರತಿಭಟಿಸಿದರು.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ನಡೆಸಲಾಯಿತು. ವಿವಿಧ ಕೆಲಸದ ನಿಮಿತ್ತ ಡಿಸಿ ಕಚೇರಿ, ತಾಲೂಕು ಕಚೇರಿಗೆ ಬಂದಿದ್ದವರಿಗೆ ಮಜ್ಜಿಗೆ ವಿತರಿಸಲಾಯಿತು. ಪ್ರತಿ ಗ್ಲಾಸ್’ಗೆ ಐದು ರೂ.ನಂತೆ ಸಂಗ್ರಹಿಸಿ ಮಜ್ಜಿಗೆ ಮಾರಾಟ ಮಾಡಲಾಯಿತು.

ಸೇವೆ ಖಾಯಂಗೆ ಆಗ್ರಹ

ಸೇವೆ ಖಾಯಂಗೆ ಒತ್ತಾಯಿಸಿ ಅತಿಥಿ ಉಪನ್ಯಾಸರು ಬಹುವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈವರೆಗೂ ಸರ್ಕಾರ ಯಾವುದೆ ಕ್ರಮ ಕೈಗೊಂಡಿಲ್ಲ. ಬೆಳಗಾವಿ ಅಧಿವೇಶನದ ಸಂದರ್ಭ ಸಾವಿರಾರು ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷ ಸೋಮಶೇಖರ ಶಿವಮೊಗ್ಗಿ ತಿಳಿಸಿದರು.

Kalleshwara-Enterprises.webp

ಇದೆ ವೇಳೆ ತಮ್ಮ ಸೇವೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT ME NEW FINAL FINAL

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment