ಶಿವಮೊಗ್ಗಕ್ಕೆ ಬಂತು ವಿಸ್ಟೋಡಾಮ್ ರೈಲು ಬೋಗಿ , ವಿಶೇಷತೆ ಏನು? ಮೊದಲ ದಿನ ಎಷ್ಟು ಜನ ಪ್ರಯಾಣಿಸಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS |  25 ಡಿಸೆಂಬರ್ 2021

ರಾಜ್ಯದ ಎರಡನೇ ವಿಸ್ಟಾಡೋಮ್ ರೈಲು ಬೋಗಿ ಇವತ್ತು ಶಿವಮೊಗ್ಗಕ್ಕೆ ಆಗಮಿಸಿತು. ಮೊದಲ ದಿನವೇ ವಿಸ್ಟಾಡೋಮ್ ಬೋಗಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಹೈಫೈ ಸೌಲಭ್ಯದ ಜೊತೆಗೆ ರೈಲು ಪ್ರಯಾಣಕ್ಕೆ ಹೊಸ ಅನುಭವ ನೀಡಲಿದೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಯಶವಂತಪುರ – ಬೆಂಗಳೂರು – ಯಶವಂತಪುರ ಇಂಟರ್ ಸಿಟ ರೈಲಿಗೆ ಒಂದು ವಿಸ್ಟಾಡೋಮ್ ಬೋಗಿ ಅಳವಡಿಸಲಾಗಿದೆ. ಇವತ್ತು ಯಶವಂತಪುರದಿಂದ ಶಿವಮೊಗ್ಗಕ್ಕೆ ಆಮಿಸಿದ್ದ ರೈಲಿನಲ್ಲಿ ಒಂದು ವಿಸ್ಟಾಡೋಮ್ ಬೋಗಿ ಅಳವಡಿಸಲಾಗಿತ್ತು. ಮೊದಲ ಟ್ರಿಪ್’ನಲ್ಲಿ ಶಿವಮೊಗ್ಗಕ್ಕೆ ಏಳು ಪ್ರಯಾಣಿಕರು ವಿಸ್ಟಾಡೋಮ್ ಬೋಗಿಯಲ್ಲಿ ಪ್ರಯಾಣ ಮಾಡಿದ್ದಾರೆ. ಶಿವಮೊಗ್ಗದಿಂದ ಎಂಟು ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ.

ಕುತೂಹಲ ಮೂಡಿಸಿದ ವಿಸ್ಟಾಡೋಮ್

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ವಿಸ್ಟಾಡೋಮ್ ಬೋಗಿ ಬಗ್ಗೆ ಸಾರ್ವಜನಿಕರು, ರೈಲ್ವೆ ಇಲಾಖೆ ಸಿಬ್ಬಂದಿ ಕುತೂಹಲ ವ್ಯಕ್ತಪಡಿಸಿದರು. ಶಿವಮೊಗ್ಗಕ್ಕೆ ರೈಲು ಬರುತ್ತಿದ್ದಂತೆ ವಿಸ್ಟಾಡೋಮ್ ಬೋಗಿ ಹತ್ತಿದ ಜನರು, ಅದರ ವಿಶೇಷತೆಗಳನ್ನು ಕಣ್ತುಂಬಿಕೊಂಡು ಖುಷಿಪಟ್ಟರು. ರೈಲ್ವೆ ಬೋಗಿಯ ತುಂಬೆಲ್ಲ ಓಡಾಡಿ, ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.

ಈ ಬೋಗಿಯಲ್ಲಿ ಏನೆಲ್ಲ ವಿಶೇಷತೆಗಳಿವೆ

ವಿಸ್ಟೋಡಾಮ್ ಬೋಗಿ ಸಂಪೂರ್ಣ ಹವಾನಿಯಂತ್ರಿತವಾಗಿದೆ. 44 ಸೀಟರ್ ಬೋಗಿಯಲ್ಲಿ ಎಲ್ಲವೂ ಆಟೋಮೆಟಿಕ್ ವ್ಯವಸ್ಥೆ. ಬೋಗಿಯೊಳಗೆ ಹೋಗುತ್ತಿದ್ದಂತೆ ಗಾಜಿನ ಬಾಗಿಲು ತನ್ನಿಂತಾನೆ ತೆರೆದುಕೊಳ್ಳುತ್ತದೆ. ಲಗೇಜ್ ಇಡಲು ಪ್ರತ್ಯೇಕ ಕಂಪಾರ್ಟ್’ಮೆಂಟ್ ವ್ಯವಸ್ಥೆ ಇದೆ. ಇನ್ನು, ಎರಡು ಬದಿಯಲ್ಲೂ ಎರಡು ಸೀಟರ್’ನ ಸುಖಾಸನಗಳಿವೆ. ಈ ಆಸನಗಳು ರೈಲಿನ ಕಿಟಕಿಯ ಕಡೆಗೆ ತಿರುಗುತ್ತವೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಸೀಟುಗಳಿಗೆ ಪುಷ್ ಬ್ಯಾಕ್ ವ್ಯವಸ್ಥೆ ಇದೆ. ತಿಂಡಿ, ತಿನಿಸಿಗಳನ್ನು ಇಡಲು ಟ್ರೇ ಇದೆ. ಅದರಲ್ಲಿಯೇ ಕಪ್ ಹೋಲ್ಡರ್ ಕೂಡ ಇದೆ. ವಿಸ್ಟಾಡೋಮ್ ಬೋಗಿಯಲ್ಲಿ ದೊಡ್ಡ ಗಾಜಿನ ಕಿಟಕಿಗಳಿವೆ. ಮೇಲ್ಭಾಗದಲ್ಲಿಯೂ ಗಾಜುಗಳನ್ನು ಅಳವಡಿಸಲಾಗಿದೆ. ಇದರಿಂದ ಪ್ರಯಾಣಿಕರು ತಮ್ಮ ಸೀಟಿನಲ್ಲಿ ಕುಳಿತು ಆಕಾಶದೆಡೆಗೆ ಗಮನ ನೆಡಬಹುದಾಗಿದೆ.

ಪುಟ್ಟ ಕಿಚನ್, ಡಿಫರೆಂಟ್ ವಿನ್ಯಾಸದ ಟಾಯ್ಲೆಟ್

ವಿಸ್ಟೋಡಾಮ್ ಬೋಗಿಯ ಒಂದು ಕೊನೆಯಲ್ಲಿ ಸಂಪೂರ್ಣ ದೊಡ್ಡ ಗಾಜು ಅಳವಡಿಸಲಾಗಿದೆ. ಹಾಗಾಗಿ ರೈಲು ಚಲಿಸುತ್ತಿದ್ದಾಗ ಬೋಗಿಯ ಕೊನೆಯಲ್ಲಿ ನಿಂತು ಸುತ್ತಮುತ್ತಲ ಪರಿಸರವನ್ನು ಕಣ್ತುಂಬಿಕೊಳ್ಳುವ ಅವಕಾಶವಿದೆ. ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಳ್ಳುವವರಿಗೆ ಈ ಜಾಗ ಅತ್ಯಂತ ಪ್ರಿಯವಾಗಲಿದೆ.

ಇನ್ನು, ರೈಲಿನಲ್ಲಿ ಪುಟ್ಟದೊಂದು ಕಿಚನ್ ವ್ಯವಸ್ಥೆ ಮಾಡಲಾಗಿದೆ. ರೆಫ್ರಿಜರೇಟರ್, ಮೈಕ್ರೋ ವೇವ್ ವೋವನ್ ಇಡಲಾಗಿದೆ. ಇನ್ನು, ಈ ಬೋಗಿಯ ಟಾಯ್ಲೆಟ್‘ಗಳು ವಿನ್ಯಾಸವೂ ವಿಭಿನ್ನವಾಗಿದೆ. ಸ್ಲೈಡಿಂಗ್ ಬಾಗಿಲುಗಳು, ಆಟೊಮೆಟೆಡ್ ಲೈಟುಗಳನ್ನು ಅಳವಡಿಸಲಾಗಿದೆ. ಈ ವ್ಯವಸ್ಥೆಗಳು ಪ್ರಯಾಣಿಕರಿಗೆ ಹಿತವಾದ ಅನುಭವ ನೀಡಲಿದೆ.

ನಿತ್ಯ ಸಂಚರಿಸಲಿದೆ ವಿಸ್ಟಾಡೋಮ್ ಬೋಗಿ

ಈವರೆಗೂ ಬೆಂಗಳೂರು – ಮಂಗಳೂರು ರೈಲಿನಲ್ಲಿ ಮಾತ್ರ ವಿಸ್ಟಾಡೋಮ್ ಬೋಗಿ ಅಳವಡಿಸಲಾಗಿತ್ತು. ಈಗ ಯಶವಂತಪುರ – ಶಿವಮೊಗ್ಗ – ಯಶವಂತಪುರ ಇಂಟರ್ ಸಿಟಿ ರೈಲಿನಲ್ಲಿ ವಿಸ್ಟಾಡೋಮ್ ಬೋಗಿಯನ್ನು ತಾತ್ಕಾಲಿಕವಾಗಿ ಅಳವಡಿಸಲಾಗಿದೆ. ಈ ಮೂಲಕ ವಿಸ್ಟಾಡೋಮ್ ಬೋಗಿಯೊಂದಿಗೆ ಸಂಚರಿಸುವ ರಾಜ್ಯದ ಎರಡನೇ ರೈಲು ಇದಾಗಿದೆ. ಈ ರೈಲು ಪ್ರತಿದಿನ ಬೆಳಗ್ಗೆ 9.15ಕ್ಕೆ ಯಶವಂತಪುರದಿಂದ ಹೊರಟು ಮಧ್ಯಾಹ್ನ 1.30ರ ಹೊತ್ತಿಗೆ ಶಿವಮೊಗ್ಗ ತಲುಪಲಿದೆ. ಮಧ್ಯಾಹ್ನ 3.30ಕ್ಕೆ ಶಿವಮೊಗ್ಗದಿಂದ ಹೊರಟು ರಾತ್ರಿ 8.30ಕ್ಕೆ ಯಶವಂತಪುರ ತಲುಪಲಿದೆ.

ತಾಳಗುಪ್ಪದವರೆಗೆ ವಿಸ್ತರಿಸಿ

2022ರ ಮಾರ್ಚ್ 31ರವರೆಗೆ ಈ ರೈಲಿನಲ್ಲಿ ವಿಸ್ಟಾಡೋಮ್ ಬೋಗಿ ಅಳವಡಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಟೂರಿಸ್ಟ್’ಗಳಿಗೆ, ಪರಿಸರ ಪ್ರಿಯರಿಗೆ ವಿಸ್ಟಾಡೋಮ್ ಬೋಗಿಯಲ್ಲಿನ ಪ್ರಯಾಣ ಹಿತವಾದ ಅನುಭವ ನೀಡಲಿದೆ. ಹಾಗಾಗಿ  ಈ ಬೋಗಿ ಇರುವ ಸಂಚಾರವನ್ನು ಶಿವಮೊಗ್ಗಕ್ಕೆ ಸೀಮಿತಗೊಳಿಸದೆ ತಾಳಗುಪ್ಪದವರೆಗೆ ವಿಸ್ತರಣೆ ಮಾಡಬೇಕು ಎಂಬುದು ಪ್ರಯಾಣಿಕರ ಅಭಿಪ್ರಾಯ. ಮಲೆನಾಡಿನ ನೇಸರವನ್ನು ಕಣ್ತುಂಬಿಕೊಳ್ಳಲು ಈ ಮಾರ್ಗದ ಅವಕಾಶವಿದೆ. ಅಲ್ಲದೆ ಈ ಮಾರ್ಗದಲ್ಲಿ ಮಳೆಗಾಲದ ಹೊತ್ತಿಗೆ ವಿಸ್ಟೋಡಾಮ್ ಬೋಗಿಯ ಪ್ರಯಾಣ ಆಹ್ಲಾದಕರ ಎನಿಸಲಿದೆ.

ವಿಸ್ಟೋಡಾಮ್ ಬೋಗಿಯನ್ನು ತಾಳಗುಪ್ಪದವರೆಗೆ ವಿಸ್ತರಣೆ ಮಾಡಿದರೆ ಶಿವಮೊಗ್ಗದ ಪ್ರವಾಸೋದ್ಯಮಕ್ಕೆ ಅನುಕೂಲವಾಗಲಿದೆ. ಈ ಬಗ್ಗೆ ರೈಲ್ವೆ ಇಲಾಖೆ ಗಮನ ಹರಿಸಬೇಕಿದೆ. ಮೊದಲ ದಿನದಿಂದಲೇ ಈ ಬೋಗಿಗೆ ಪ್ರಯಾಣಿಕರು ಟಿಕೆಟ್ ಬುಕ್ ಮಾಡಿರುವುದು ರೈಲ್ವೆ ಇಲಾಖೆಗೆ ಸಮಾಧಾನ ತಂದಿದೆ. ಮುಂದೆ ದೊಡ್ಡ ಪ್ರಮಾಣದಲ್ಲಿ ಪ್ರಯಾಣಿಕರು ಈ ಮಾರ್ಗದಲ್ಲಿ ಪ್ರಯಾಣಿಸುವ ಅಂದಾಜಿದೆ.

AVvXsEjPXhqbK3h6XS0zGeVofJMqXeb JEkWgQB0iOT6vVS4hEDw9O0qBioEMp03ry4ywY0nOIGwH HZXlTxrZ 0QcAU5LL8PRtMyUnfBjnw5rAzx

AVvXsEgvZi Qtn90tuhg 67qE36oa2bEhAUkkAaEj5hlisVhMSx7qLnWMVl1Cgvp0AnEYTxmc9UKc0mhtDPuh6aHHyHZK1dfTK41MdE1Q9lzgzivnNGRGk8TwaDYZ9W8TeLnO1J82h2I1W4ykW5JAgRGjP9MwIftQa6zotu1D0Vqya7lPWOk

AVvXsEi2Xe99qgiQjUhQ7URwpq26cBG8Dcb4XNqcojtBIYBxNoQPAl5D83UsrrSNYw5t1lx5PT5Xr282lbB0Ebhxbw0a 6fc6PViWDVFHjO0EPGrYTbBEZUhSvpeDDvJR y99itvY3Heyyryn3w 0 XfiF4p31ZzV p8vQLq7S8kSuXXYwPz9sc8bApTvo9WBA=s926

AVvXsEgmL2Cs9 DDQ4qFX6LAWXPiQVXCFHDKq7G13S7XjLDtCVJIuzJXaw6s4iPGmGbIhWAZBvzWeK1Fs LnOmxuS9r x YQGjzivANkCmWYmnMhCRCT5LgxSfUo6s

AVvXsEgElOKtQTHNxTPHqsJbxJXDgvVqkBQRLo5GdlRKImCVurHEI U0SmKt ytzs1Nj S2ehab UY xIG7bsEY7Nnqo3Q IIyaVInlmu8YnXYIxkg2l95BLPHQkmJMTlxYg RsU3LDO0loYZfOyysR92kpkCBb u2OIGTXOwPH6m8ABkda6ekikiOve4auGuQ=s926

AVvXsEgoNrKOxsbfuhO jA7zUYAI3k96 WU7x3HDIUS4zCacVy0PVG1wLiW0dp8koDe6dxfqm ghuTFAwje71qu mFLiL11 BK9CknJ6ci9zJrQGuPvKTLUAnyOBlKZkFY6pnOr4Y MB23HFBt5nLOBu1l7aL8MLnLuQsBSTs52r07XnR8UhNQdIhBMiyGEpw=s926

AVvXsEgCM67QQqSQrc n vds

AVvXsEhTF1mT Pw58D040Z2AIiW7b5Q2KRCJoWjuanGspL63YFG KlETpO919QKt0MsUZDvnFS1qL0lxUQrIY7BMpDWUcFJmkXFDMNdTbTf07riz3BPersF3qrkACRT 8QMObNGjj5GZh4s1t Mb3EZcAyBWUiDPELG82QCrN0Y7R2W47RqLmiJGlKpBE4NXA=s926

AVvXsEhqOwrqJ80gaj6y4q1wNwLWNhd oAQEclBBDXhiSw4CUqZhucpb7e3REWdvfvdoQTW 35NtSCF5GnW3K09uOim4TS5tJgRVPB4f69C ni4 18 QRHjsy8rLQEkxyx5VQVcoG6gjYraL1MKaKkmKwTil2J2e FVhryNWUf1SUfGQyWSpXbXBuspucoWE8A=s926

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 25, 2021

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

Leave a Comment