ಶಿವಮೊಗ್ಗದಲ್ಲಿ ಮತ್ತೆ ‘ಕೆಂಪು ಪೌಡರ್ ಗ್ಯಾಂಗ್’ ಪ್ರತ್ಯಕ್ಷ, ಮಹಿಳೆಗೆ ವಂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS |  26 ಡಿಸೆಂಬರ್ 2021

ಚಿನ್ನಾಭರಣ ಹೊಳೆಯುವಂತೆ ಮಾಡುವುದಾಗಿ ನಂಬಿಸಿ, ವಂಚಿಸುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ವೃದ್ಧೆಯೊಬ್ಬರಿಂದ ಒಂದು ಲಕ್ಷ ಮೌಲ್ಯದ ಚಿನ್ನದ ಸರವನ್ನು ಕದ್ದೊಯ್ಯಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ವಂಚಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಶಿವಮೊಗ್ಗ ತಾಲೂಕು ಹಾರನಹಳ್ಳಿ ಕೋಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಸೀತಮ್ಮ (72) ಎಂಬುವವರ ಮಾಂಗಲ್ಯ ಸರವನ್ನು ಕಳವು ಮಾಡಲಾಗಿದೆ.

ಕೆಂಪು ಪೌಡರ್ ಹಚ್ಚಿ ಯಾಮಾರಿಸಿದರು

ಶನಿವಾರ ಮಧ್ಯಾಹ್ನ ಸೀತಮ್ಮ ಅವರ ಮನೆ ಬಳಿಗೆ ಬಂದ ಇಬ್ಬರು ಅಪರಿಚಿತರು, ಮನೆಯಲ್ಲಿರುವ ದೇವರ ವಸ್ತುಗಳನ್ನು ಸ್ವಚ್ಛ ಮಾಡಿಕೊಡುವುದಾಗಿ ನಂಬಿಸಿದ್ದಾರೆ. ಸೀತಮ್ಮ ಅವರು ತಂದು ಕೊಟ್ಟ ದೇವರ ಪೂಜಾ ಸಾಮಗ್ರಿಯೊಂದಕ್ಕೆ, ಕೆಂಪು ಬಣ್ಣದ ಪೌಡರ್ ಹಾಕಿ, ಪಳಪಳ ಹೊಳೆಯುವಂತೆ ಮಾಡಿ ಕೊಟ್ಟಿದ್ದಾರೆ. ಇದರಿಂದ ಖುಷಿಯಾದ ಸೀತಮ್ಮ ಅವರಿಗೆ, ‘ಮನೆಯಲ್ಲಿರುವ ಚಿನ್ನಾಭರಣಗಳನ್ನು ಕೊಟ್ಟರೆ ಇದೆ ರೀತಿ ಹೊಳೆಯುವಂತೆ ಮಾಡಿಕೊಡುವುದಾಗಿ’ ತಿಳಿಸಿದ್ದಾರೆ.

ವಂಚಕರ ಮಾತು ನಂಬಿದ ಸೀತಮ್ಮ ಅವರು, ತಮ್ಮ 80 ಗ್ರಾಂ ತೂಕದ ಮಾಂಗಲ್ಯ ಸರ ಕೊಟ್ಟಿದ್ದಾರೆ. ಬಳಿಕ, ಒಂದು ಸ್ಟೀಲ್ ಬಾಕ್ಸ್ ತಂದು ಕೊಡುವಂತೆ ಕೇಳಿದ ವಂಚಕರು, ಅದಕ್ಕೆ ನೀರು ಹಾಕಿ, ಕೆಂಪು ಪುಡಿಯ ಸುರಿದರು. ಮಾಂಗಲ್ಯ ಸರವನ್ನು ಬಾಕ್ಸ್ ಒಳಗೆ ಹಾಕಿ ಸ್ವಚ್ಛಗೊಳಿಸುವಂತೆ ನಟಿಸಿದರು. ಇದನ್ನು ಕುದಿಸಬೇಕು ಎಂದು ಕೇಳಿದರು.

ಸೀತಮ್ಮ ಅವರು ಅಪರಿಚಿತರ ಪೈಕಿ ಒಬ್ಬನನ್ನು ತಮ್ಮ ಅಡುಗೆ ಮನೆಗೆ ಕರೆದೊಯ್ದು, ಗ್ಯಾಸ್ ಸ್ಟೌ ಮೇಲೆ ಬಾಕ್ಸ್ ಇರಿಸಿ ಕುದಿಸಿದರು. ನೀರು ಬಿಸಿ ಆರಿದ ಮೇಲೆ ಚಿನ್ನದ ಸರವನ್ನು ಹೊರಗೆ ತೆಗೆಯಿರಿ ಎಂದು ತಿಳಿಸಿ, ಆ ಇಬ್ಬರು ವಂಚಕರು ಮನೆಯಿಂದ ತೆರಳಿದ್ದಾರೆ. ಸ್ವಲ್ಪ ಸಮಯದ ಬಳಿಕ ಸೀತಮ್ಮ ಅವರು ಬಾಕ್ಸ್’ನಲ್ಲಿದ್ದ ಕೆಂಪು ನೀರಿನ ಒಳಗೆ ಕೈ ಹಾಕಿ ಪರಿಶೀಲಿಸಿದಾಗ ಚಿನ್ನದ ಸರ ನಾಪತ್ತೆಯಾಗಿರುವುದು ಗೊತ್ತಾಗಿದೆ.

ಅಕ್ಕಪಕ್ಕದವರಿಗೆ ಮಾಹಿತಿ

ಆತಂಕಗೊಂಡ ಸೀತಮ್ಮ ಅವರು ಚಿನ್ನದ ಸರ ಕಳ್ಳತನವಾಗಿರುವ ಕುರಿತು ಅಕ್ಕಪಕ್ಕದ ಮನೆಯವರಿಗೆ ತಿಳಿಸಿದ್ದಾರೆ. ಎಲ್ಲರೂ ಸೇರಿ ಹುಡುಕಿದ್ದಾರೆ. ವಂಚಕರು ಎಲ್ಲಿಯೂ ಸಿಗದ ಹಿನ್ನೆಲೆ, ತಮ್ಮ ಕುಟುಂಬದೊಂದಿಗೆ ಬಂದ ಸೀತಮ್ಮ ಅವರು ಕುಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಹಿಂದೆಯು ಇದೆ ಮಾದರಿಯಲ್ಲಿ ವಂಚನೆ ಮಾಡಲಾಗಿತ್ತು. ಅದರ ವಿವರ ಇಲ್ಲಿದೆ. ಕ್ಲಿಕ್ ಮಾಡಿ, ಪೂರ್ತಿ ಓದಿ | ಶಿವಮೊಗ್ಗದ ಮಹಿಳೆಯರೆ ಎಚ್ಚರ, ನಿಮ್ಮ ಮನೆಗೂ ಬರಬಹುದು ‘ಬ್ರೌನ್ ಪೌಡರ್’ ಗ್ಯಾಂಗ್, ಏನಿದು?

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 26, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment