ಭದ್ರಾವತಿ ಅಂತರಗಂಗೆಯ 9 ಮಂದಿ ‘ಘರ್ ವಾಪಸಿ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS |  27 ಡಿಸೆಂಬರ್ 2021

ರಾಜ್ಯದಲ್ಲಿ ಮತಾಂತರ ಕಾಯಿದೆಯ ಬಗ್ಗೆ ಚರ್ಚೆ ಬಿಸಿಯಾಗಿರುವಾಗಲೇ ಭದ್ರಾವತಿಯಲ್ಲಿ ಒಂದೇ ಕುಟುಂಬದ 9 ಮಂದಿ ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ವಿಶೇಷ ಪೂಜೆಗಳ ಮೂಲಕ ಇವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಲಾಯಿತು.

ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬುವರು ತಮ್ಮ ಕುಟುಂಬದ ಸಮೇತ ಹಿಂದೂ ಧರ್ಮಕ್ಕೆ ಭಾನುವಾರ ಮರಳಿದ್ದಾರೆ.

40 ವರ್ಷಗಳ ಹಿಂದೆ ಮತಾಂತರ

ಜಯಶೀಲನ್ ಅವರ ತಂದೆ ಏಳುಮಲೈ ಎನ್ನುವವರು ಸುಮಾರು 40 ವರ್ಷಗಳ ಹಿಂದೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಆದರೆ, ಕುಟುಂಬದವರಾರೂ ಚರ್ಚ್‌ಗೆ ಹೋಗುತ್ತಿರಲಿಲ್ಲ. ಕ್ರೈಸ್ತ ಧರ್ಮದ ಪ್ರಾರ್ಥನೆಗಳನ್ನು ಮಾಡುತ್ತಿರಲಿಲ್ಲ. ಬದಲಿಗೆ ಹಿಂದೂ ಧರ್ಮದ ಆಚರಣೆಗಳನ್ನೇ ಪಾಲಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಎರಡು ವರ್ಷಗಳ ಹಿಂದಿನಿಂದ ಜಯಶೀಲನ್ ಮತ್ತು ಜಯಮ್ಮ ಅವರ ಕುಟುಂಬ ಹಿಂದೂ ಧರ್ಮಕ್ಕೆ ಮರಳುವ ಪ್ರಯತ್ನದಲ್ಲಿದ್ದರು ಎಂದು ತಿಳಿದು ಬಂದಿದೆ.

ಯಾರೆಲ್ಲ ಹಿಂದೂ ಧರ್ಮಕ್ಕೆ ಮರಳಿದ್ದಾರೆ?

ಭದ್ರಾವತಿ ಅಂತರಗಂಗೆ ಗ್ರಾಮದ ಜಯಶೀಲನ್, ಜಯಮ್ಮ, ಹಿರಿಯ ಮಗ ಪ್ರಭಾಕರನ್, ಪತ್ನಿ ಲಲಿತಾ, ಮಕ್ಕಳಾದ ಭರತ್ ಕುಮಾರ್, ಭಾವನಾ, ದ್ವಿತೀಯ ಪುತ್ರ ಪ್ರಕಾಶ್, ಪತ್ನಿ ಶ್ವೇತಾ, ಪುತ್ರಿ ಪೃಥ್ವಿ ಅವರು ಹಿಂದೂ ಧರ್ಮಕ್ಕೆ ಮರಳಿದ್ದಾರೆ. ಈ ಕುಟುಂಬ ವರ್ಕ್ ಶಾಪ್ ನಡೆಸುತ್ತಿದೆ. ಜೊತೆಗೆ ಟೈಲರಿಂಗ್ ವೃತ್ತಿಯನ್ನೂ ಮಾಡಿಕೊಂಡಿದೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಬಜರಂಗದಳ ವಿ.ಹೆಚ್.ಪಿ ಸಾರಥ್ಯ

ಜಯಶೀಲನ್ ಕುಟುಂಬದವರು ಹಿಂದೂ ಧರ್ಮಕ್ಕೆ ಮರಳುವ ವಿಚಾರವನ್ನು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆ ಮುಖಂಡರಿಗೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಭದ್ರಾವತಿಯ ಜನ್ನಾಪುರ ಶ್ರೀ ರಾಮ ಭಜನಾ ಮಂಡಳಿಯಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಒಂದೇ ಕುಟುಂಬದ ಒಂಭತ್ತು ಮಂದಿಯನ್ನು ಹಿಂದೂ ಧರ್ಮಕ್ಕೆ ಸ್ವಾಗತ ಕೋರಲಾಯಿತು. ಕೃಷ್ಣಮೂರ್ತಿ ಸೋಮಯಾಜಿ, ಅರಕೆರೆಯ ಕರಿಸಿದ್ದೇಶ್ವರ ಸ್ವಾಮೀಜಿ ಅವರ ಸಮ್ಮುಖದಲ್ಲಿ ಘರ್ ವಾಪಸಿ ಕಾರ್ಯಕ್ರಮ ನಡೆಯಿತು.

‘ವಿದೇಶದಿಂದ ಹರಿದು ಬರುತ್ತಿದೆ ಹಣ’

ಸಮಾರಂಭದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ, ‘ಹಿಂದೂ ಧರ್ಮವನ್ನು ನಾಶಪಡಿಸಲು ಬಡವರ ಬಲಹೀನತೆಯನ್ನು ಅರಿತುಕೊಂಡು, ಮತಾಂತರ ಮಾಡಲಾಗುತ್ತಿದೆ. ಮತಾಂತರ ಕಾರ್ಯಕ್ಕೆ ವಿದೇಶದಿಂದ ಹೇರಳವಾಗಿ ಹಣ ಹರಿದು ಬರುತ್ತಿದೆ. ಈ ಹಣವನ್ನು ಒತ್ತಾಯದ ಮತಾಂತರ ಕಾರ್ಯಕ್ಕೆ ಬಳಕೆ ಮಾಡಲಾಗುತ್ತಿದೆ. ಹಿಂದೂ ಧರ್ಮದ ಸಂಸ್ಕಾರ, ಹಬ್ಬ ಹರಿದಿನಗಳನ್ನು ಶ್ರದ್ಧೆಯಿಂದ ಆಚರಿಸಿದರೆ ಶಾಂತಿ, ಸಮೃದ್ಧಿ, ನೆಮ್ಮದಿ ಖಂಡಿತ ದೊರೆಯಲಿದೆ’ ಎಂದರು.

‘ಇನ್ಮುಂದೆ ಸೌಲಭ್ಯಗಳು ದೊರೆಯುವುದಿಲ್ಲ’

ಜ್ಯೋತಿಷಿ ಸುರೇಶ್ ಬಾಬು ಮಾತನಾಡಿ, ‘ಮತಾಂತರ ಆಗುತ್ತಿರುವ ಬಹಳ ಜನರು ಸಮಾಜದಲ್ಲಿ ಹಿಂದುಳಿದವರು, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದವರು ಎಂಬುದು ಗಮನಾರ್ಹ. ಸರ್ಕಾರ ಇವರಿಗೆ ಎಲ್ಲಾ ಸೌಲಭ್ಯ ಒದಗಿಸುತ್ತಿದೆ. ಮತಾಂತರವಾದರೆ ಈ ಸೌಲಭ್ಯಗಳಿಂದ ಅವರು ವಂಚಿತವಾಗುತ್ತಾರೆ’ ಎಂದರು.

ಮಹತ್ವ ಪಡೆದ ಘರ್ ವಾಪಸಿ

ಮತಾಂತರ ನಿಷೇಧ ಕಾಯ್ದೆ ಕುರಿತು ರಾಜ್ಯಾದ್ಯಂತ ಭಾರಿ ಚರ್ಚೆ ನಡೆಯುತ್ತಿದೆ. ಈ ಸಂದರ್ಭ ಒಂದೇ ಕುಟುಂಬದ ಒಂಭತ್ತು ಮಂದಿ ಹಿಂದೂ ಧರ್ಮಕ್ಕೆ ಮರಳಿರುವುದು ಮಹತ್ವ ಪಡೆದುಕೊಂಡಿದೆ. ಈ ಬೆಳವಣಿಗೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಷೇರ್ ಮಾಡಿಕೊಳ್ಳುತ್ತಿದ್ದಾರೆ.

ಸಮಾರಂಭದಲ್ಲಿ ವಿಶ್ವಹಿಂದೂ ಪರಿಷತ್ತಿನ ಪ್ರಮುಖರಾದ ಡಿ.ಆರ್‌. ಶಿವಕುಮಾರ್‌, ವೈ.ಎಸ್.ರಾಮಮೂರ್ತಿ, ಎಸ್. ನಾರಾಯಣ್, ಪಿ. ಮಂಜುನಾಥ್ ರಾವ್, ಶೈಲೇಶ್ ಕೋಟಿ, ಸಿ. ಮಹೇಶ್ವರಪ್ಪ ಶಿವಮೂರ್ತಿ ಉಪಸ್ಥಿತರಿದ್ದರು.

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 27, 2021

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

Leave a Comment