ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 29 ಡಿಸೆಂಬರ್ 2021
ಮಾದಕ ವಸ್ತುಗಳ ಮಾರಾಟ ತಡೆಗಟ್ಟಲು ಸ್ಥಾಪಿಸಲಾಗಿರುವ ವಿಶೇಷ ತಂಡ ಶರಾವತಿ ನಗರದಲ್ಲಿ ದಾಳಿ ನಡೆಸಿ ಯುವಕನೊಬ್ಬನನ್ನು ಬಂಧಿಸಿದೆ. ಪಿಎಸ್ಐ ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿ ಯುವಕನ ವಿರುದ್ಧ ಪ್ರಕರಣ ದಾಖಲು ಮಾಡಿದೆ.
ಆಕಾಶ್ (23) ಬಂಧಿತ ಯುವಕ. ಬೈಕ್ ರಿಪೇರಿ ಕೆಲಸ ಮಾಡುವ ಈತನ ಮೇಲೆ ದಾಳಿ ನಡೆಸಿ ಮೆಡಿಕಲ್ ಪರೀಕ್ಷೆಗೆ ಒಳಪಡಿಸಿ, ಪ್ರಕರಣ ದಾಖಲು ಮಾಡಲಾಗಿದೆ.
ಏನಿದು ಪ್ರಕರಣ? ದಾಳಿಗೇನು ಕಾರಣ?
ಮಾದಕ ವಸ್ತುಗಳ ಮಾರಾಟ ತಡೆಗೆ ರಚಿಸಲಾಗಿರುವ ವಿಶೇಷ ತಂಡದ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಶರಾವತಿ ನಗರ ಓವರ್ ಹೆಡ್ ಟ್ಯಾಂಕ್ ಬಳಿಕ ಆಕಾಶ್ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಆಕಾಶ್’ನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೆಡಿಕಲ್ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಗಾಂಜಾ ಸೇವನೆ ಮಾಡಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ದೊಡ್ಡಪೇಟೆ ಠಾಣೆಯಲ್ಲಿ ಆಕಾಶ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ವಿಶೇಷ ತಂಡದ ಪಿಎಸ್ಐ ಮಂಜುನಾಥ್, ಸಿಬ್ಬಂದಿ ರಮೇಶ್, ಉಮೇಶ್ ನಾಯ್ಕ, ಲಂಕೇಶ, ಬಸವಂತಪ್ಪ, ಪ್ರಕಾಶ್, ಮಂಜುನಾಥನಾಯ್ಕ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















