ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 30 ಡಿಸೆಂಬರ್ 2021
VISL ಎಂಪ್ಲಾಯಿಸ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್ ಮೇಲೆ ಭದ್ರಾವತಿ ನ್ಯೂಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. 26 ಮಂದಿಯನ್ನು ಬಂಧಿಸಿ, ನಗದು, ಇಸ್ಪೀಟ್ ಕಾರ್ಡುಗಳನ್ನು ವಶಕ್ಕೆ ಪಡೆದಿದ್ದಾರೆ.
ಭದ್ರಾವತಿಯ ನ್ಯೂ ಕಾಲೋನಿಯಲ್ಲಿರುವ VISL ಎಂಪ್ಲಾಯಿಸ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್’ನಲ್ಲಿ, ಅಂದರ್ ಬಾಹರ್ ಆಟವಾಡಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಕ್ಲಬ್’ನಲ್ಲಿ 26 ಮಂದಿ ವಿವಿಧ ಟೇಬಲ್’ಗಳಲ್ಲಿ ಕುಳಿತು ಅಂದರ್ ಬಾಹರ್ ಆಟವಾಡುತ್ತಿದ್ದರು. ದಾಳಿ ನಡೆಸಿದ ಪೊಲೀಸರು, ಆಟದಲ್ಲಿ ತೊಡಗಿದ್ದವರನ್ನು ಬಂಧಿಸಿದ್ದಾರೆ. ಇವರಿಂದ 11,110 ರೂ. ನಗದು, ಇಸ್ಪೀಟ್ ಕಾರ್ಡ್’ಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರ ಪೈಕಿ ಭದ್ರಾವತಿಯ ವಿವಿಧ ಬಡಾವಣೆಗೆ ಸೇರಿದ ನಿವೃತ್ತ ನೌಕರರು, ಖಾಸಗಿ ಕಂಪನಿಯಗಳ ಉದ್ಯೋಗಿಗಳು, ಚಾಲಕರು ಇದ್ದಾರೆ.
ಎಎಸ್’ಪಿ ಜಿತೇಂದ್ರ ಕುಮಾರ್ ದಯಂ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪ್ರೊಬೆಷನರಿ ಡಿವೈಎಸ್’ಪಿ ಗಜಾನನ ಸತಾರ್, ನ್ಯೂಟೌನ್ ಠಾಣೆ ಪಿಎಸ್ಐ, ಸಿಬ್ಬಂದಿ ಪಾಲ್ಗೊಂಡಿದ್ದರು.

LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















