ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 1 ಜನವರಿ 2022
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಶ್ರೀಪಾದ ಹೆಗಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರ ಚುನಾವಣೆಗೆ ಇವತ್ತು ದಿನಾಂಕ ನಿಗದಿಯಾಗಿತ್ತು.
ಶಿಮುಲು ಅಧ್ಯಕ್ಷರ ಚುನಾವಣೆ ಕೊನೆ ಹಂತದವರೆಗೂ ತೀವ್ರ ಕುತೂಹಲ ಮೂಡಿಸಿತ್ತು. ಕೊನೆ ಕ್ಷಣದಲ್ಲಿ ಪ್ರತಿಸ್ಪರ್ಧಿ ನಾಮಪತ್ರ ಹಿಂಪಡೆದ ಹಿನ್ನೆಲೆ ಶ್ರೀಪಾದ ಹೆಗಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಬ್ಬರು ನಾಮಪತ್ರ ಸಲ್ಲಿಕೆ
ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದರು. ಹಿರಿಯೂರಿನ ತಿಪ್ಪೇಸ್ವಾಮಿ ಮತ್ತು ಶ್ರೀಪಾದ ಹೆಗಡೆ ಅವರು ನಾಮಪತ್ರ ಸಲ್ಲಿಸಿದ್ದರು. ಇದರಿಂದ ಚುನಾವಣೆ ಬಗ್ಗೆ ಕುತೂಹಲ ಮೂಡಿತ್ತು.
ನಾಮಪತ್ರ ಹಿಂಪಡೆಯಲು 15 ನಿಮಿಷ ಕಾಲವಕಾಶವಿತ್ತು. ಈ ವೇಳೆ ತಿಪ್ಪೇಸ್ವಾಮಿ ಅವರು ತಮ್ಮ ನಾಮಪತ್ರ ಹಂಪಡೆದರು. ಹಾಗಾಗಿ ಶ್ರೀಪಾದ ಹೆಗಡೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






