ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ವಮೊಗ್ಗದ ಲೈವ್.ಕಾಂ | SHIMOGA NEWS | 7 ಜನವರಿ 2022
ತಮಿಳುನಾಡಿನಲ್ಲಿ ಓಂ ಶಕ್ತಿ ದರ್ಶನ ಪಡೆದು ಶಿವಮೊಗ್ಗಕ್ಕೆ ಮರಳಿರುವ ಆರು ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ.
ಶಿವಮೊಗ್ಗ, ಭದ್ರಾವತಿಯಿಂದ ನಾಲ್ಕು ಸಾವಿರಕ್ಕೂ ಅಧಿಕ ಮಹಿಳೆಯರು, ಮಕ್ಕಳು ಓಂ ಶಕ್ತಿ ದರ್ಶನ ಪಡೆಯಲು ತಮಿಳುನಾಡಿಗೆ ತೆರಳಿದ್ದರು. ಅವರೆಲ್ಲ ಜಿಲ್ಲೆಗೆ ಮರಳುತ್ತಿದ್ದಂತೆ ಪರೀಕ್ಷೆ ನಡೆಸಲಾಗಿದೆ. ಆರು ಮಂದಿಗೆ ಕರೋನ ಸೋಂಕು ತಗುಲಿರುದು ದೃಢವಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ‘ಬುಧವಾರ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಗುರುವಾರ ರಾಂಡಮ್ ಟೆಸ್ಟ್ ಮಾಡಿದಾಗ ಮತ್ತೆ ನಾಲ್ವರಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಓಂ ಶಕ್ತಿ ದರ್ಶನ ಪಡೆದು ಬಂದ ಒಟ್ಟು ಆರು ಮಂದಿಗೆ ಸೋಂಕು ತಗುಲಿದೆ’ ಎಂದು ತಿಳಿಸಿದರು.
ಇನ್ನು ಮೂರ್ನಾಲ್ಕು ದಿನ ನಿಗಾ
ಓಂ ಶಕ್ತಿ ದರ್ಶನ ಪಡೆದು ಹಿಂತಿರುಗುವವರಿಗೆ ಏಳು ದಿನ ಹೋಮ್ ಕ್ವಾರಂಟೈನ್’ಗೆ ಒಳಗಾಗುವಂತೆ ಸೂಚಿಸಲಾಗಿತ್ತು. ಅದರ ನಡುವೆ ರಾಂಡಮ್ ಟೆಸ್ಟ್ ಮಾಡಲಾಗುತ್ತಿದೆ. ಈ ವೇಳೆ ಸೋಂಕು ಕಾಣಿಸಿಕೊಳ್ಳುತ್ತಿದೆ.
‘ದರ್ಶನ ಪಡೆದು ಹಿಂತಿರುಗಿದ ದಿನವೆ ಕರೋನಾ ಟೆಸ್ಟ್ ಮಾಡಿದ್ದೇವೆ. ಆ ದಿನವೇ ಪಾಸಿಟಿವ್ ಬರಬೇಕ ಎಂದೇನಿಲ್ಲ. ಮೂರ್ನಾಲ್ಕು ದಿನದ ಬಳಿಕವು ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಇನ್ನೂ ಮೂರ್ನಾಲ್ಕು ದಿನ ಇವರ ಮೇಲೆ ನಿಗಾ ಇಡುತ್ತೇವೆ. ರಾಂಡಮ್ ಟೆಸ್ಟ್ ಮುಂದುವರೆಸುತ್ತೇವೆ’ ಎಂದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಓಂ ಶಕ್ತಿ ಯಾತ್ರಾರ್ಥಿಗಳಿಂದ ಆತಂಕ
ಮೂರನ ಅಲೆ ಕರೋನ ವ್ಯಾಪಕವಾಗಿ ಹರಡುತ್ತಿದ್ದ ಹೊತ್ತಲ್ಲೆ ಓಂ ಶಕ್ತಿ ದರ್ಶನಕ್ಕೆ ತೆರಳಲಾಗಿತ್ತು. ಶಿವಮೊಗ್ಗ, ಭದ್ರಾವತಿಯಿಂದ 80ಕ್ಕೂ ಹೆಚ್ಚು ಬಸ್ಸುಗಳಲ್ಲಿ ಮಹಿಳೆಯರು, ಮಕ್ಕಳು ಪ್ರವಾಸ ಕೈಗೊಂಡಿದ್ದರು. ವಿವಿಧ ದೇಗುಲಗಳಿಗೆ ಭೇಟಿ ನೀಡಿದ ಬಳಿಕ ಶಿವಮೊಗ್ಗಕ್ಕೆ ಹಿಂತಿರುಗಿದ್ದಾರೆ. ನಾಲ್ಕು ಸಾವಿರಕ್ಕೂ ಅಧಿಕ ಮಹಿಳೆಯರು, ಮಕ್ಕಳಿಗೆ ಹೋಮ್ ಕ್ವಾರಂಟೈನ್’ಗೆ ಸೂಚಿಸಲಾಗಿದೆ.
ಈಗ ಆರು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದು ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಓಂ ಶಕ್ತಿ ಪ್ರವಾಸವೇ ಸೂಪರ್ ಸ್ಪ್ರೆಡ್ಡರ್ ಆಗುವ ಭೀತಿಯಲ್ಲಿ ಜಿಲ್ಲಾಡಳಿತ ನಿಗಾ ವಹಿಸಿದೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು





