ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 9 ಮಾರ್ಚ್ 2019
ಎಟಿಎಂ ಕಾರ್ಡ್ ಬ್ಲಾಕ್ ಆಗಿದೆ ಅಂತಾ, ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿದ ವಂಚಕರು, ಜಿಲ್ಲೆಯ ಇಬ್ಬರ ಅಕೌಂಟ್’ನಿಂದ ಒಂದು ಲಕ್ಷಕ್ಕೂ ಹೆಚ್ಚು ಹಣ ದೋಚಿದ್ದಾರೆ.
ಕೇಸ್ 1
ಶಿವಮೊಗ್ಗದ ಹೊಸಮನೆ ಬಡಾವಣೆಯ ಸೌಮ್ಯ ನಾಯಕಿ ಎಂಬುವವರಿಗೆ ಕರೆ ಮಾಡಿದ ವಂಚಕನೊಬ್ಬ, ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ಸೌಮ್ಯ ಅವರ ಎಟಿಎಂ ಕಾರ್ಡ್ ಬ್ಲಾಕ್ ಆಗಿದೆ, ನವೀಕರಣ ಮಾಡಬೇಕಿದೆ ಎಂದು ತಿಳಿಸಿದ್ದಾನೆ. ಇದನ್ನು ನಂಬಿದ ಸೌಮ್ಯ, ಎಟಿಎಂ ಕಾರ್ಡ್ ನಂಬರ್ ನೀಡಿದ್ದಾರೆ. ಕೆಲವೇ ಕ್ಷಣದಲ್ಲಿ ಅವರ ಅಕೌಂಟ್’ನಿಂದ 50 ಸಾವಿರ ರೂಪಾಯಿ, ಆನ್’ಲೈನ್ ಮೂಲಕ ಡ್ರಾ ಮಾಡಿಕೊಳ್ಳಲಾಗಿದೆ.

ಕೇಸ್ 2
ಮತ್ತೊಂದು ಪ್ರಕರಣದಲ್ಲಿ ತೀರ್ಥಹಳ್ಳಿಯ ಶಿವಾನಂದ ಎಂಬುವವರಿಗೆ ಕರೆ ಮಾಡಿದ ವಂಚಕ, ಎಟಿಎಂ ಕಾರ್ಡ್ ಬ್ಲಾಕ್ ಆಗಲಿದೆ ಎಂದು ನಂಬಿಸಿದ್ದಾನೆ. ಅವರಿಂದ ಎಟಿಎಂ ಕಾರ್ಡ್ ನಂಬರ್ ಪಡೆದುಕೊಂಡಿದ್ದಾನೆ. ಕೆಲವೇ ಹೊತ್ತಲ್ಲಿ ಶಿವಾನಂದ ಅವರ ಖಾತೆಯಿಂದ, 64,996 ರೂಪಾಯಿಯನ್ನು ದೋಚಿದ್ದಾನೆ.
ವಂಚನೆ ವಿರುದ್ಧ ಪ್ರತ್ಯೇಕವಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





