‘ಜನರೊಂದಿಗೆ ಹೇಗೆ ವರ್ತಿಸಬೇಕು ಅನ್ನುವ ಕುರಿತು ಶಿವಮೊಗ್ಗ ಪೊಲೀಸರಿಗೆ ತರಬೇತಿ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಜನವರಿ 2022

ಯಾರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬುದರ ಕುರಿತು ಶಿವಮೊಗ್ಗ ಪೊಲೀಸರಿಗೆ ತರಬೇತಿ ನಡೆಸಲಾಗುತ್ತದೆ. ಆ ಮೂಲಕ ಪೊಲೀಸರ ಬಗ್ಗೆ ಜನರಲ್ಲಿರುವ ದೃಷ್ಟಿಕೋನ ಬದಲಾವಣೆ ಮಾಡುವತ್ತ ಗಮನ ಹರಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದರು.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಶಿವಮೊಗ್ಗ ಪ್ರೆಸ್ಟ್ ಟ್ರಸ್ಟ್ ವತಿಯಿಂದ ಇವತ್ತು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ದೂರುಗಳನ್ನು ಸ್ವೀಕರಿಸುತ್ತಿಲ್ಲ ಎಂಬ ಕುರಿತು ಆರೋಪಗಳು ಕೇಳಿ ಬರುತ್ತವೆ. ಹಾಗಾಗಿ ಯಾರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂದು ತರಬೇತಿ ನೀಡಲಾಗುತ್ತದೆ. ಇದಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

‘ಬೀಟ್ ವ್ಯವಸ್ಥೆ ಚುರಕು’

ಇನ್ನು, ಜಿಲ್ಲೆಯಲ್ಲಿ ಬೀಟ್ ವ್ಯವಸ್ಥೆ ಬಲಗೊಳಿಸುವ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದರು.

‘ಬೀಟ್ ವ್ಯವಸ್ಥೆ ಇನ್ನಷ್ಟು ಸಮರ್ಪಕವಾಗಿ ನಿರ್ವಹಿಸಬೇಕಿದೆ. ಒಂದು ಹಳ್ಳಿ ಅಂದರೆ ಎಷ್ಟು ಜನ ಇದ್ದಾರೆ. ಯಾರೆಲ್ಲ ಇದ್ದಾರೆ. ಅವರಲ್ಲಿ ಅಪರಾಧ ಹಿನ್ನೆಲೆ ಇರುವವರು ಯಾರು ಅನ್ನುವ ಕುರಿತು ಸಂಪೂರ್ಣ ಮಾಹಿತಿ ಸಿದ್ಧಪಡಿಸಿಕೊಳ್ಳಬೇಕು. ಇನ್ನು ಆರು ತಿಂಗಳಲ್ಲಿ ಕಟ್ಟುನಿಟ್ಟು ಬೀಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದರು.

‘ಕಲ್ಲು ಹೊಡೆದು ತರಬೇತಿ’

ಮತ್ತೊಂದೆಡೆ ಗುಂಪುಗಳ ನಿರ್ವಹಣೆ ಕುರಿತು ಶಿವಮೊಗ್ಗ ಪೊಲೀಸರಿಗೆ ತರಬೇತಿ ನೀಡಲಾಗುತ್ತಿದೆ. ಇದರಿಂದ ತುರ್ತು ಸಂದರ್ಭದಲ್ಲಿ ಪೊಲೀಸರು ಕ್ಷಿಪ್ರವಾಗಿ ಕಾರ್ಯನಿರ್ವಹಿಸುವ ವಿಧಾನವನ್ನು ತಿಳಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದರು.

‘ಸಿಬ್ಬಂದಿಗೆ ಮಾಬ್ ಕಂಟ್ರೋಲ್ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಕಲ್ಲು ತೂರಾಟದ ಸಂದರ್ಭದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರುವ ವಿಧಾನ ತಿಳಿಸಿ ಕೊಡಲಾಗುತ್ತಿದೆ. ಕಲ್ಲು ಹೊಡೆದು ಅದರಿಂದ ಪಾರಾಗಿ, ಪರಿಸ್ಥಿತಿ ಹತೋಟಿಗೆ ತರುವುದನ್ನು ಹೇಳಿಕೊಡಲಾಗುತ್ತಿದೆ’ ಎಂದು ತಿಳಿಸಿದರು.

ABOUT NEW DEC 2021 REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 27, 2022

Leave a Comment