ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | ಆಗುಂಬೆ NEWS | 30 ಜನವರಿ 2022
ತೋಟದಲ್ಲಿ ಒಣಗಿಸಲು ಇಟ್ಟಿದ್ದ ಒಂದೂವರೆ ಕ್ವಿಂಟಾಲ್ ಅಡಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಆಗುಂಬೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಸುಧಾಕರ್ ಎಂದು ಗುರುತಿಸಲಾಗಿದೆ. ಕಳವು ಮಾಡಿದ್ದ ಅಡಕೆಯನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ಏನಿದು ಆಗುಂಬೆ ಅಡಕೆ ಕಳವು ಕೇಸ್?
ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಕೌರಿಹಕ್ಕಲು ಗ್ರಾಮದ ವೆಂಕಟೇಶ್ ಅವರ ತೋಟದಲ್ಲಿ ಅಡಕೆ ಕಳವಾಗಿತ್ತು. ತೋಟದಲ್ಲಿ ಉದುರಿದ್ದ ಅಡಕೆಯನ್ನು ಆರಸಿ ತಂದು ಖಾಲಿ ಜಾಗದಲ್ಲಿ ಒಣಗಿಸಲು ಹಾಕಲಾಗಿತ್ತು.
ಇದನ್ನೂ ಓದಿ | ಇವತ್ತಿನ ಅಡಕೆ ಧಾರಣೆ | 28 ಜನವರಿ 2022 | APMC
ವೆಂಕಟೇಶ್ ಅವರು ಇಲ್ಲದೆ ಇರುವ ಸಂದರ್ಭ ತೋಟದಲ್ಲಿ ಒಣಗಿಸಲು ಹಾಕಿದ್ದ ಅಡಕೆ ಪೈಕಿ, ಒಂದೂವರೆ ಕ್ವಿಂಟಾಲ್’ನಷ್ಟು ಕಳ್ಳತನವಾಗಿತ್ತು. ಈ ಸಂಬಂಧ ವೆಂಕಟೇಶ್ ಅವರು ಆಗುಂಬೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕಳವಾದ ಅಡಕೆಯ ಮೌಲ್ಯ ಸುಮಾರು 50 ಸಾವಿರ ರೂ. ಎಂದು ದೂರಿನಲ್ಲಿ ತಿಳಿಸಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಸುಧಾಕರ್ ಎಂಬಾತನನ್ನು ಬಂಧಿಸಿದ್ದಾರೆ. ಆತನಿಂದ ಅಡಕೆಯನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆದಿದೆ.
ತೀರ್ಥಹಳ್ಳಿ ಡಿವೈಎಸ್ ಪಿ ಶಾಂತವೀರ ಅವರ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಪ್ರವೀಣ್ ನೀಲಮ್ಮನವರ್, ಆಗುಂಬೆ ಪಿಎಸ್ ಐ ಶಿವಕುಮಾರ್ ನೇತೃತ್ವದಲ್ಲಿ ಸಿಬ್ಬಂದಿ ವೀರೇಂದ್ರ, ಸುದರ್ಶನ, ಆದರ್ಶ, ಮಂಜುನಾಥ ಅವರ ತಂಡ ಆರೋಪಿಯನ್ನು ಬಂಧಿಸಿದೆ.

Info : Shimoga Police
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






