ಶಿವಮೊಗ್ಗದ ಲೈವ್.ಕಾಂ | ಭದ್ರಾವತಿ NEWS | 30 ಜನವರಿ 2022
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ವ್ಯಕ್ತಿಯೊಬ್ಬರು ರೈಲು ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.
ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಪ್ರಕಾಶ್ ಪುಂಡಲೀಕ ಶಾನುಭೋಗ (55) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ತಾಳಗುಪ್ಪ – ಬೆಂಗಳೂರು ರೈಲು ಹತ್ತುವಾಗ ಘಟನೆ ಸಂಭವಿಸಿದೆ.
ಭದ್ರಾವತಿ ನಿಲ್ದಾಣದಲ್ಲಿ ಹೇಗಾಯ್ತು ಆವಘಡ?
ತಾಳಗುಪ್ಪ ರೈಲಿನಲ್ಲಿ ಬಂದಿದ್ದ ಪ್ರಕಾಶ್ ಪುಂಡಲೀಕ ಶಾನುಭೋಗ ಅವರು ರೈಲು ನಿಲ್ದಾಣದಲ್ಲಿ ಇಳಿದಿದ್ದರು. ರೈಲು ಹೊರಡುತ್ತಿದ್ದಂತೆ ಅವರು ಅವಸರದಲ್ಲಿ ರೈಲು ಹತ್ತಲು ಮುಂದಾಗಿದ್ದಾರೆ.
ಇದನ್ನೂ ಓದಿ | ರೈಲಿಗೆ ಸಿಲುಕಿ ವ್ಯಕ್ತಿ ಸಾವು
ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಪ್ರಕಾಶ್ ಪುಂಡಲೀಕ ಶಾನುಭೋಗ ಅವರು ಕೆಳಗೆ ಬಿದ್ದಿದ್ದಾರೆ. ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.