ಹಿಡಿಶಾಪದ ಬಳಿಕ ಬಂತು ಬ್ಯಾರಿಕೇಡ್, ಕಾಲು ಮುರಿದುಕೊಂಡ ಯುವಕನನ್ನು ಕಾಡುತ್ತಿದೆ ಮತ್ತೊಂದು ಚಿಂತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 1 ಫೆಬ್ರವರಿ 2022

ಕಣ್ಣು ಕಾಣದ ಯುವಕನೊಬ್ಬ ಗುಂಡಿಗೆ ಬಿದ್ದು ಕಾಲು ಮುರಿದುಕೊಂಡ ಬಳಿಕ ಸ್ಮಾರ್ಟ್ ಸಿಟಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಬಾಲರಾಜ ಅರಸ್ ರಸ್ತೆಯಲ್ಲಿ ತೋಡಿದ್ದ ಗುಂಡಿಯ ಸುತ್ತಲು ಬ್ಯಾರಿಕೇಡ್ ಅಳವಡಿಸಿದ್ದಾರೆ.

Nanjappa Hospital Home Care

ಇಮಾಮ್ ಸಾಬ್ ಇನಾಂದಾರ್ (38) ಎಂಬುವವರು ಹುಟ್ಟಿನಿಂದ ಅಂಧರು. ಶಿವಮೊಗ್ಗ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಇವರು, ಅಲ್ಲಿಂದ ತಮ್ಮ ಹಾಸ್ಟೆಲ್’ಗೆ ತೆರಳುತ್ತಿದ್ದಾಗ ಗುಂಡಿಗೆ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಸ್ಮಾರ್ಟ್ ಸಿಟಿ ಕಾಮಗಾರಿಗಾಗಿ ದಿಢೀರ್ ಗುಂಡಿ ತೋಡಿದ್ದು, ಬ್ಯಾರಿಕೇಡ್ ಅಳವಡಿಸಿರಲಿಲ್ಲ. ನಿತ್ಯ ಓಡಾಡುವ ರಸ್ತೆಯಲ್ಲಿ ಗುಂಡಿ ತೋಡಿರುವುದು ಗೊತ್ತಾಗದೆ ಇಮಾಮ್ ಸಾಬ್ ಇನಾಂದಾರ್ ಬಿದ್ದು, ಕಾಲು ಮುರಿದುಕೊಂಡಿದ್ದರು.

ಹಿಡಿಶಾಪದ ಬಳಿಕ ಬಂತು ಬ್ಯಾರಿಕೇಡ್

ಸ್ಮಾರ್ಟ್ ಸಿಟಿ ಗುತ್ತಿಗೆದಾರರ ನಿರ್ಲಕ್ಷ್ಯ ಮತ್ತು ಅಧಿಕಾರಿಗಳ ಅಸಡ್ಡೆಯಿಂದಾಗಿ ಇಮಾಮ್ ಸಾಬ್ ಇನಾಂದಾರ್ ಆಸ್ಪತ್ರೆ ಸೇರಿದ್ದಾರೆ. ಈ ಕುರಿತು ಶಿವಮೊಗ್ಗ ಲೈವ್.ಕಾಂ ಜನವರಿ 31ರಂದು ಕಣ್ಣು ಕಾಣದ ವ್ಯಕ್ತಿಯ ಕಾಲು ಮುರಿದ ಶಿವಮೊಗ್ಗ ಸ್ಮಾರ್ಟ್ ಸಿಟಿ ಗುಂಡಿ ಎಂದು ವಿಸ್ತೃತ ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ಹಲವರು, ಸ್ಮಾರ್ಟ್ ಸಿಟಿ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇಮಾಮ್ ಸಾಬ್ ಇನಾಂದಾರ್ ಹೇಗಿದಾರೆ?

ಇತ್ತ, ಕಾಲು ಮುರಿದುಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಮಾಮ್ ಸಾಬ್ ಇನಾಂದಾರ್ ಅವರು ಡಿಸ್ಚಾರ್ಜ್ ಆಗಿದ್ದಾರೆ. ತಮ್ಮ ತವರು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮನೆಗೆ ಮರಳಿದ್ದಾರೆ. ‘ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದರಿಂದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದೇನೆ. ಕೆಲವು ದಿನದ ಬಳಿಕ ಚಿಕಿತ್ಸೆಗೆ ಬರುವಂತೆ ವೈದ್ಯರು ತಿಳಿಸಿದ್ದಾರೆ. ಆಗ ಬರಬೇಕಿದೆ’ ಎಂದು ಇಮಾಮ್ ಸಾಬ್ ಇನಾಂದಾರ್ ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.

Youth Hospitalized and smart city pot hole

ಮಾನವೀಯತೆ ಮರೆತ ಅಧಿಕಾರಿಗಳು

ಅಂಧರೊಬ್ಬರು ಸ್ಮಾರ್ಟ್ ಸಿಟಿ ಗುಂಡಿಗೆ ಬಿದ್ದ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಶಿವಮೊಗ್ಗದ ನಾಗರಿಕರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಸಂಭವಿಸಿ ಒಂದು ವಾರ ಕಳೆದಿದೆ. ಇಷ್ಟಾದರೂ ಅಧಿಕಾರಿಗಳ್ಯಾರೂ ಇಮಾಮ್ ಸಾಬ್ ಇನಾಂದಾರ್ ಆರೋಗ್ಯ ವಿಚಾರಿಸಿಲ್ಲ. ಮಾನವೀಯತೆ ದೃಷ್ಟಿಯಿಂದಲೂ ಅವರನ್ನು ಸಂಪರ್ಕ ಮಾಡಿಲ್ಲ.

‘ಈತನಕ ಯಾರೊಬ್ಬರು ನಮ್ಮನ್ನು ಸಂಪರ್ಕಿಸಿಲ್ಲ. ದೂರು ನೀಡುವಾಗ ಪೊಲೀಸರು ಬಂದು ಹೋಗಿದ್ದರು. ಮಾಧ್ಯಮದವರು ಬಂದು ಆರೋಗ್ಯ ವಿಚಾರಿಸಿದರು. ಆದರೆ ಸ್ಮಾರ್ಟ್ ಸಿಟಿ ಅಧಿಕಾರಿಗಳ್ಯಾರು ತಮ್ಮನ್ನು ಸಂಪರ್ಕ ಮಾಡಿಲ್ಲ’ ಎಂದು ನೋವಿನಿಂದಲೇ ಹೇಳುತ್ತಾರೆ ಇಮಾಮ್ ಸಾಬ್ ಇನಾಂದಾರ್.

AVvXsEhBwRUL MosBFuESeOGPrtdijdVfO0PPGGvrajk5

ಬಿಲ್ ಕಟ್ಟಲು ನೆರವಾದ ಸ್ನೇಹಿತರು

ಇಮಾಮ್ ಸಾಬ್ ಇನಾಂದಾರ್ ಅವರ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ಇಂತಹ ಸಂದರ್ಭ ಅವರು ಕಾಲು ಮುರಿದುಕೊಂಡು ಮಲಗಿದ್ದಾರೆ. ಇದು ಅವರ ಕುಟುಂಬಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ. ಇವರ ಪರಿಸ್ಥಿತಿಯ ಅರಿವಿರುವ ಕೆಲವು ಸ್ನೇಹಿತರು, ಹಿತೈಷಿಗಳು, ಇಮಾಮ್ ಸಾಬ್ ಇನಾಂದಾರ್ ಅವರ ಆಸ್ಪತ್ರೆ ಬಿಲ್ ಭರಿಸಲು ನೆರವಾಗಿದ್ದಾರೆ. ಈಗ ಪುನಃ ಆಸ್ಪತ್ರೆ ಖರ್ಚು, ಮನೆ ನಿರ್ವಹಣೆ ಹೇಗೆ ಎಂಬುದು ಇಮಾಮ್ ಸಾಬ್ ಇನಾಂದಾರ್ ಅವರು ಕೊರಗಾಗಿದೆ.

ಇಮಾಮ್ ಸಾಬ್ ಇನಾಂದಾರ್ ಅವರಿಗೆ ನೆರವಾಗಲು ಬಯಸುವವರು ಅವರ ಮೊಬೈಲ್ ನಂಬರ್ 7338123472 ಗೆ ಕರೆ ಮಾಡಬಹುದಾಗಿದೆ.

about smg live readers

about Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 1, 2022

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment