ಕಣ್ಣು ಕಾಣದ ಯುವಕ ಬಿದ್ದ ಗುಂಡಿಗೂ, ಸ್ಮಾರ್ಟ್ ಸಿಟಿಗೂ ಸಂಬಂಧವಿಲ್ಲವಂತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 02 ಫೆಬ್ರವರಿ 2022

ರಸ್ತೆ ಪಕ್ಕದ ಗುಂಡಿಗೆ ಬಿದ್ದು ಅಂಧರೊಬ್ಬರು ಗಾಯಗೊಂಡು ಒಂದು ವಾರ ಕಳೆದ ನಂತರ, ಸ್ಮಾರ್ಟ್ ಸಿಟಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಆ ಗುಂಡಿಗು ಸ್ಮಾರ್ಟ್ ಸಿಟಿಗೂ ಸಂಬಂಧವಿಲ್ಲ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

nanjappa hospital package

ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಅವರು ಇವತ್ತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಸ್ಮಾರ್ಟ್ ಸಿಟಿ ಎಂ.ಡಿ ಸ್ಪಷ್ಟನೆ ಏನು?

‘ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿ ದಿನಾಂಕ: 27.01.2022 ರಂದು ಮದ್ಯಾಹ್ನ ಶಿವಮೊಗ್ಗ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉದ್ಯೋಗಿಯೊಬ್ಬರು ಬಿದ್ದು ಗಾಯಗೊಂಡಿರುವುದಕ್ಕೆ ಸ್ಮಾರ್ಟ್ ಸಿಟಿ ಕಾಮಗಾರಿ ಕಾರಣವಾಗಿರುವುದಿಲ್ಲ’

‘ಅದು ದಿನೇಶ್ ಇಂಜಿನಿಯರಿಂಗ್ ಲಿಮಿಟೆಡ್ ಎಂಬ ಕಂಪನಿಯವರು ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಸಲು ಅನುವಾಗುವಂತೆ ಹಾರಿಜಾಂಟಲ್ ಡೈರೆಕ್ಷನ್ ಡ್ರಿಲ್ಲಿಂಗ್ ಗಾಗಿ ತೋಡಿದ ಗುಂಡಿಯಾಗಿರುತ್ತದೆ.’

‘ಸದರಿ ಕಂಪನಿಯವರಿಗೆ ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯಾಪ್ತಿ ಪ್ರದೇಶದಲ್ಲಿ ಹೆಚ್.ಡಿ.ಡಿ. ಮಾಡದಂತೆ ಹಾಗೂ ಸ್ಮಾರ್ಟ್ ಸಿಟಿಯ ವತಿಯಿಂದ ಈಗಾಗಲೇ ಅಳವಡಿಸಿರುವ 7 ವೇ ಮಲ್ಟಿ ಡಕ್ಟ್ ಮುಖಾಂತರವೇ ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಸುವಂತೆ ದಿನಾಂಕ:27.12.2021 ರ ನೋಂದಾಯಿತ ಅಂಚೆಯ ಪತ್ರದ ಮೂಲಕ ತಿಳುವಳಿಕೆ ನೀಡಲಾಗಿದೆ ಹಾಗೂ ಈ ಕಂಪೆನಿಯ ಪ್ರತಿನಿಧಿಗಳಾದ ಸಂಜಯ್, ಪದ್ಮರಾಜ್ ಹಾಗೂ ಕಿರಣ್ ಎಂಬುವರಿಗೆ ಮುಖತ: ಹಾಗೂ ದೂರವಾಣಿ ಮೂಲಕ ಹಲವು ಬಾರಿ ತಿಳಿಸಲಾಗಿದೆ.’

Shimoga Commissioner Chidananda Vatare

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಸ್ಮಾರ್ಟ್ ಸಿಟಿಯ ಯಾವುದೇ ಪಾತ್ರ ಇರುವುದಿಲ್ಲ. ಬದಲಿಗೆ ಯಾವುದೇ ಆಕಸ್ಮಿಕಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಆದಾಗ್ಯೂ ನೀಡಿದ ಸೂಚನೆಯನ್ನು ಮೀರಿ ಯಾರಿಗೂ ತಿಳಿಯದಂತೆ ತಡರಾತ್ರಿ ವೇಳೆಯಲ್ಲಿ ಗುಂಡಿ ತೆಗೆದು ಅಪಘಾತಕ್ಕೆ ಕಾರಣರಾದ  ‘ದಿನೇಶ್ ಇಂಜಿನಿಯರಿಂಗ್ ಲಿಮಿಟೆಡ್ ಕಂಪನಿಯ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಈ ಕಚೇರಿ ವತಿಯಿಂದ ಪೊಲೀಸ್ ಅಧಿಕಾರಿಗಳನ್ನು ಕೋರಲಾಗಿದೆ.’

‘ನಗರದಲ್ಲಿ ಯಾವುದೇ ಆಕಸ್ಮಿಕಗಳು ನಡೆದಲ್ಲಿ ಮೂಲ ಕಾರಣವನ್ನು ಸರಿಯಾಗಿ ತಿಳಿದುಕೊಳ್ಳದೇ ಅಥವಾ ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಘಟನೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಪಡೆಯದೇ ನೇರವಾಗಿ ಸ್ಮಾರ್ಟ್ ಸಿಟಿಯ ಮೇಲೆ ಅನಗತ್ಯ ಆಪಾದನೆ ಹೊರಿಸಿ ಪತ್ರಿಕೆಗಳಲ್ಲಿ ವರದಿ ಪ್ರಕಟಿಸುವುದರಿಂದ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದಂತಾಗುತ್ತದೆ. ಆದ್ದರಿಂದ ಸ್ಟಾರ್ಟ್ ಸಿಟಿ ವ್ಯಾಪ್ತಿಯಲ್ಲಿ ಯಾವುದೇ ಆಕಸ್ಮಿಕಗಳು ನಡೆದಾಗ ಘಟನೆಗೆ ಕಾರಣವನ್ನು ತಿಳಿದುಕೊಂಡು ಅಥವಾ ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಮಾಹಿತಿ ಪಡೆದು ವರದಿ ಮಾಡುವುದು ಸೂಕ್ತವಾಗಿರುತ್ತದೆ’

ಇದನ್ನೂ ಓದಿ | ಹಿಡಿಶಾಪದ ಬಳಿಕ ಬಂತು ಬ್ಯಾರಿಕೇಡ್, ಕಾಲು ಮುರಿದುಕೊಂಡ ಯುವಕನನ್ನು ಕಾಡುತ್ತಿದೆ ಮತ್ತೊಂದು ಚಿಂತೆ

ಇದನ್ನೂ ಓದಿ | ಕಣ್ಣು ಕಾಣದ ವ್ಯಕ್ತಿಯ ಕಾಲು ಮುರಿದ ಶಿವಮೊಗ್ಗ ಸ್ಮಾರ್ಟ್ ಸಿಟಿ ಗುಂಡಿ

about smg live readers

Shimoga District Profile

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 2, 2022

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment