ಕೋಟಿ ಕೋಟಿ ರಾಜಧನ ಬಾಕಿ, ಮರಳು ಕ್ವಾರಿಗಳಿಗೆ ಬೀಗ ಜಡಿದ ಗ್ರಾಮ ಪಂಚಾಯಿತಿ ಸದಸ್ಯರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 2 ಫೆಬ್ರವರಿ 2022

ಕೋಟ್ಯಂತರ ರುಪಾಯಿ ರಾಜಧನ ಬಿಡುಗಡೆ ಮಾಡದ ಹಿನ್ನೆಲೆ ಗ್ರಾಮ ಪಂಚಾಯಿತಿ ಸದಸ್ಯರೆ ಮರಳು ಕ್ವಾರಿಗಳಿಗೆ ಬೀಗ ಜಡಿದಿದ್ದಾರೆ. ಈ ಮೂಲಕ ಸರ್ಕಾರದ ನಡೆ ವಿರುದ್ಧ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.

Nanjappa Hospital covid care

ತೀರ್ಥಹಳ್ಳಿ ತಾಲೂಕು ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿಗೆ ಕಳೆದ ಮೂರು ವರ್ಷದಿಂದ ರಾಜಧನ ಬಿಡುಗಡೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸದಸ್ಯರೆಲ್ಲ ಒಗ್ಗೂಡಿ ಮರಳು ಕ್ವಾರಿಗೆ ಬೀಗ ಹಾಕಿದ್ದಾರೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮರಳು ಕ್ವಾರಿಗೆ ಭೇಟಿ ನೀಡಿದ ಗ್ರಾಮ ಪಂಚಾಯಿತಿ ಸದಸ್ಯರು, ರಾಜಧನಕ್ಕೆ ಆಗ್ರಹಿಸಿದರು. ರಾಜಧನ ಬಿಡುಗಡೆಯಾದ ಬಳಿಕ ಮರಳು ತೆಗೆಯುವಂತೆ ಪಟ್ಟು ಹಿಡಿದಿದ್ದಾರೆ.

ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿಗೆ ಕಳೆದ ಮೂರು ವರ್ಷದಿಂದ ರಾಜಧನ ಬಿಡುಗಡೆಯಾಗಿಲ್ಲ. ಈ ಕುರಿತು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವರಿಕೆ ಮಾಡಲಾಗಿದೆ. ಸಚಿವರಿಗೂ ಮನವಿ ಮಾಡಲಾಗಿದೆ. ಆದರೂ ಸರ್ಕಾರ ರಾಜಧನ ಬಿಡುಗಡೆ ಮಾಡಿಲ್ಲ. ನಾಲೂರು ಕೋಳಿಗೆ 2.48 ಕೋಟಿ ರೂ. ರಾಜಧನ ಬಾಕಿ ಇದೆ.

ಅರೇಹಳ್ಳಿಯಲ್ಲೂ ಕ್ವಾರಿಗೆ ಬೀಗ

ಮೂರು ವರ್ಷದಿಂದ ರಾಜಧನ ಬಿಡುಗಡೆಯಾಗದ ಹಿನ್ನೆಲೆ ಅರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಮರಳು ಕ್ವಾರಿಗೆ ಬೀಗ ಹಾಕಲಾಗಿದೆ. ರಾಜಧನ ಬಿಡುಗಡೆಯಾದ ಬಳಿಕ ಮರಳು ತೆಗೆಯುವಂತೆ ಗ್ರಾಮ ಪಂಚಾಯಿತಿ ಸದಸ್ಯರು ಆಗ್ರಹಿಸಿದ್ದಾರೆ.

sand mining gate locked

ಅರೇಹಳ್ಳಿ ಗ್ರಾಮ ಪಂಚಾಯಿತಿಗೆ 1.45 ಕೋಟಿ ರೂ. ರಾಜಧನ ಬಾಕಿ ಇದೆ. ಇದನ್ನು ಸರ್ಕಾರ ಬಿಡುಗಡೆ ಮಾಡಿದರೆ ಮಾತ್ರ ಮರಳು ತೆಗೆಯಲು ಅವಕಾಶ ನೀಡುವುದಾಗಿ ಗ್ರಾಮ ಪಂಚಾಯಿತಿ ಸದಸ್ಯರು ಪಟ್ಟು ಹಿಡಿದಿದ್ದಾರೆ.

about smg live readers

Grama Panchayaths in ShimogaAbout Shivamogga Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 2, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment