ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 5 ಫೆಬ್ರವರಿ 2022
ಶಿವಮೊಗ್ಗ ವಿಮಾನ ನಿಲ್ದಾಣದ ಮೊದಲ ಹಂತದ ಕಾಮಗಾರಿ ಭರದಿಂದ ಸಾಗಿದೆ. ಈ ನಡುವೆ ವಿಮಾನಯಾನ ಸೇವೆ ಒದಗಿಸುವ ಸಂಬಂಧ ಗುತ್ತಿಗೆ ಪಡೆಯಲು ವಿವಿಧ ಕಂಪನಿಗಳಿಗೆ ಆಹ್ವಾನ ನೀಡಲಾಗಿದೆ. ಇನ್ನೊಂದೆಡೆ ಕಾಮಗಾರಿ ಕುರಿತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿ ಅವರು ಪರಿಶೀಲನೆ ನಡೆಸಿದರು.
ಅಧಿಕಾರಿಗಳಿಂದ ಕಾಮಗಾರಿ ಪರಿಶೀಲನೆ
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಸೆಲ್ವಕುಮಾರ್, ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ನೇತೃತ್ವದ ಅಧಿಕಾರಿಗಳ ತಂಡ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿತು. ಶುಕ್ರವಾರ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ, ಗುತ್ತಿಗೆದಾರರು, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮೊದಲ ಹಂತದ ಕಾಮಗಾರಿ ಬಿರುಸು
ವಿಮಾನ ನಿಲ್ದಾಣದ ಮೊದಲ ಹಂತದ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ. 758 ಎಕರೆ ಪ್ರದೇಶದಲ್ಲಿ ಕಾಮಗಾರಿ ನಡೆಯುತ್ತಿದೆ. ಮೊದಲ ಹಂತದಲ್ಲಿ ರನ್ ವೇ, ಎಫ್ರಾನ್, ಟ್ಯಾಕ್ಸಿ ವೇ, ಕಾಂಪೌಂಡ್, ಸಂಪರ್ಕ ರಸ್ತೆ, ವರ್ತುಲ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಮತ್ತೊಂದೆಡೆ ಎರಡನೇ ಹಂತದ ಕಾಮಗಾರಿ ಕೂಡ ಚುರುಕು ಪಡೆದುಕೊಂಡಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ, ವಿದ್ಯುತ್ ಉಪ ಕೇಂದ್ರಗಳು ಎರಡನೇ ಹಂತದ ಕಾಮಗಾರಿಯಲ್ಲಿದೆ. ಈ ಕಾಮಗಾರಿ 2022ರ ಜೂನ್ ವೇಳೆಗೆ ಪೂರ್ಣಗೊಳ್ಳಬೇಕಿದೆ.
ವಿಮಾನ ನಿಲ್ದಾಣಕ್ಕೆ ಬಿಡ್ ಆಹ್ವಾನ
ಮತ್ತೊಂದೆಡೆ, ಕೈಗಾರಿಕಾ ಮೂಲಭೂತ ಸೌಕರ್ಯ ನಿಗಮದ ವತಿಯಿಂದ ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸಂಬಂಧ ಗುತ್ತಿಗೆ ಆಹ್ವಾನಿಸಲಾಗಿದೆ. ಉಡಾನ್ ಯೋಜನೆ ಅಡಿ ಈ ಏರ್ ಪೋರ್ಟ್’ಗಳಿಂದ ವಿಮಾನ ಹಾರಾಟ ನಡೆಸುವಂತೆ ಬಿಡ್ ಕರೆಯಲಾಗಿದೆ.
ಇದನ್ನೂ ಓದಿ | ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ನೀಲನಕ್ಷೆ ರೆಡಿ, ಎರಡನೇ ಪ್ಯಾಕೇಜ್ ಕರಾರಿಗೆ ಸಹಿ
ಕಡಿಮೆ ದರದಲ್ಲಿ ವಿಮಾನಯಾನ ಸೇವೆ ಒದಗಿಸುವುದು ಉಡಾನ್ ಯೋಜನೆ ಪ್ರಮುಖ ಉದ್ದೇಶ. ನಿಗಮದ ವತಿಯಿಂದ ಬಿಡ್ ಕರೆದಿರುವುದರಿಂದ ಶಿವಮೊಗ್ಗ ವಿಮಾನ ನಿಲ್ದಾಣದತ್ತ ಜನರು ಪುನಃ ಕುತೂಹಲದ ಕಣ್ಣಿಡುವಂತಾಗಿದೆ.
ಇದನ್ನೂ ಓದಿ | ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಚುರುಕು, ಸಂಸದರ ನೇತೃತ್ವದ ತಂಡದಿಂದ ಪರಿಶೀಲನೆ, ಕೆಲಸ ಎಷ್ಟಾಗಿದೆ?

Shimoga District Profile | About Shivamogga Live
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















