ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಫೆಬ್ರವರಿ 2022
ನಿಷೇಧಾಜ್ಞೆ ಆದೇಶವನ್ನು ಉಲ್ಲಂಘಿಸಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಗುಂಪುಗೂಡಿ ಸಂಸ್ಥಾಪನಾ ದಿನಾಚರಣೆ ಮಾಡಿದ್ದಾರೆ. ಇದರ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಕೆ.ಆರ್.ಪುರಂ, ಬೈಪಾಸ್ ರಸ್ತೆ, ಇಲಿಯಾಸ್ ನಗರ, ಆರ್.ಎಂ.ಎಲ್ ನಗರ, ಮಾರ್ನಮಿಬೈಲಿನಲ್ಲಿ ಪಿಎಫ್ಐ ಸಂಸ್ಥಾಪನಾ ದಿನಾಚರಣೆ ಮಾಡಿ, ಧ್ವಜಾರೋಹಣ ನೆರವೇರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಿಎಫ್ಐ ಸಂಘಟನೆ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ.
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.