ಶಿವಮೊಗ್ಗದ ಲೈವ್.ಕಾಂ | SHIMOGA NEWS | 19 ಫೆಬ್ರವರಿ 2022
ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸಿಬ್ಬಂದಿ ಆದರ್ಶ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ.
ಆದರ್ಶ (30) ಅವರು ಕಾಶಿಪುರದಲ್ಲಿ ಇರುವ ತಮ್ಮ ಮನೆಯಲ್ಲಿ ಕಳೆದ ರಾತ್ರಿ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕುಟುಂಬದವರು ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆದರ್ಶ ಅವರು ಕೊನೆಯುಸಿರೆಳೆದಿದ್ದಾರೆ.
ಸಂತಾಪ | ಆದರ್ಶ ಅವರ ಅಕಾಲಿಕ ಸಾವು ಶಿವಮೊಗ್ಗ ಪತ್ರಕರ್ತರಿಗೆ ಆಘಾತ ಉಂಟು ಮಾಡಿದೆ. ಶಿವಮೊಗ್ಗ ಪ್ರೆಸ್ ಟ್ರಸ್ಟ್ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ.
ಆದರ್ಶ ಅವರ ಅಕಾಲಿಕ ಅಗಲಿಕೆ ಶಿವಮೊಗ್ಗ ಲೈವ್.ಕಾಂ ತಂಡಕ್ಕೆ ನೋವುಂಟು ಮಾಡಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನಮ್ಮ ತಂಡವು ಪ್ರಾರ್ಥಿಸುತ್ತದೆ.