NEWS HIGHLIGHTS
ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.ಭಜರಂಗದಳ ಕಾರ್ಯಕರ್ತನ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೂರ್ವ ವಲಯ ಐಜಿಪಿ ಆಗಮಿಸಿದ್ದಾರೆ. ಹೊರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರು ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ.
ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರಿಂದ ಪರಿಸ್ಥಿತಿ ಮತ್ತು ಬಂದೋಬಸ್ತ್ ಕುರಿತು ಮಾಹಿತಿ ಪಡೆದಿದ್ದಾರೆ. ಅಲ್ಲದೆ ಶಿವಮೊಗ್ಗ ನಗರದಲ್ಲಿ ಗಸ್ತು ಆರಂಭಿಸಿದ್ದಾರೆ.
ಇನ್ನೊಂದು ಕಡೆ ಶಿವಮೊಗ್ಗ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ತುರ್ತು ಇರುವ ಹಿನ್ನೆಲೆ ಹೊರ ಜಿಲ್ಲೆಯಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜಿಸುವ ಸಾಧ್ಯತೆ ಇದೆ.