ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಟೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಬಾಲಕನೊಬ್ಬ ಸ್ಮಾರ್ಟ್ ಸಿಟಿ ಚರಂಡಿಗೆ ಬಿದ್ದು ಗಾಯಗೊಂಡಿದ್ದಾನೆ. ಚರಂಡಿಗೆ ಸ್ಲಾಬ್ ಅಳವಡಿಸದೆ ಇರುವುದರಿಂದ ಘಟನೆ ಸಂಭವಿಸಿದೆ. ಸ್ಥಳೀಯರು ಮತ್ತು ಕೆಲಸಗಾರರು ಬಾಲಕನ ರಕ್ಷಣೆ ಮಾಡಿದ್ದಾರೆ.
ಶಿವಮೊಗ್ಗದ ಹೊಸಮನೆ ಬಡಾವಣೆ ಸಮೀಪ ಜೈಲ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಮೂರನೆ ತರಗತಿಯ ಓದುತ್ತಿರುವ ರಾಘವೇಂದ್ರ ಗಾಯಗೊಂಡಿರುವ ಬಾಲಕ.
ಜೈಲ್ ರಸ್ತೆಯಲ್ಲಿ ಹೊಸದಾಗಿ ಚರಂಡಿ ನಿರ್ಮಿಸಲಾಗಿದೆ. ಅಲ್ಲಲ್ಲಿ ಸ್ಲಾಬ್ ಅಳವಡಿಸದೆ ಹಾಗೆ ಬಿಡಲಾಗಿದೆ. ಟೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ರಾಘವೇಂದ್ರ ಗುಂಡಿಗೆ ಬಿದ್ದಿದ್ದಾನೆ. ಆತನ ಬಲಗಣ್ಣಿನ ಮೇಲ್ಭಾಗ ಪೆಟ್ಟು ಬಿದ್ದಿದೆ. ಸ್ಥಳೀಯರು ಕೂಡಲೆ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.
ಕಣ್ಣಿನ ಮೇಲ್ಭಾಗ ಹೊಲಿಗೆ ಹಾಕಲಾಗಿದೆ. ಕಣ್ಣು ಬಿಡಲಾಗದೆ ರಾಘವೇಂದ್ರ ನೋವು ಅನುಭವಿಸುತ್ತಿದ್ದಾನೆ. ಸ್ಮಾರ್ಟ್ ಸಿಟಿ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಬಾಲಕನ ಕುಟುಂಬದವರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಹಾರಕ್ಕೆ ಒತ್ತಾಯಿಸಿದ್ದಾರೆ.
ರಾಘವೇಂದ್ರ ಸ್ಮಾರ್ಟ್ ಸಿಟಿ ಚರಂಡಿಯೊಳಗೆ ಬೀಳುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ | ಕಣ್ಣು ಕಾಣದ ಯುವಕ ಬಿದ್ದ ಗುಂಡಿಗೂ, ಸ್ಮಾರ್ಟ್ ಸಿಟಿಗೂ ಸಂಬಂಧವಿಲ್ಲವಂತೆ
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






